ಶಿಕಾರಿಪುರದ ಶಿವಮೊಗ್ಗ ರಸ್ತೆಯಿಂದ ಬೈಕ್‌ ಜಾಥಾ, ನ.30ರಂದು ಸಂತೆ ಮೈದಾನದಲ್ಲಿ ಸಮಾರಂಭ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 27 NOVEMBER 2023

SHIKARIPURA : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ (B.Y.Vijayendra) ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರಿಗೆ ನ.30ರಂದು ಶಿಕಾರಿಪುರದ ಹಳೆ ಸಂತೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ತಿಳಿಸಿದರು.

ಶಿಕಾರಿಪುರ ಪಟ್ಟಣದ ಕುಮದ್ವತಿ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕೆ.ಎಸ್.ಗುರುಮೂರ್ತಿ, ನಮ್ಮ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವುದು ಸಾಮಾನ್ಯ ಕಾರ್ಯಕರ್ತರಿಂದ ಎಲ್ಲರಿಗು ಹೆಮ್ಮೆಯ ಸಂಗತಿ ಎಂದರು.

ಇದನ್ನೂ ಓದಿ – 2024ರ ಸರ್ಕಾರಿ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ, ಎಷ್ಟು ರಜೆಗಳಿವೆ?

ನ.30ರಂದು ಶಿವಮೊಗ್ಗ ರಸ್ತೆಯ ಎಪಿಎಂಸಿ ಮುಂಭಾಗದಿಂದ ಬೈಕ್‌ ಜಾಥಾ ನಡೆಯಲಿದೆ. ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನ ತಲುಪಿ ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿ ದರ್ಶನ ಮಾಡಲಿದ್ದಾರೆ. ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳಿ ನಂತರ ಹಳೆ ಸಂತೆ ಮೈದಾನ ತಲುಪಲಿದೆ. ಶ್ರೀ ಮಾರಿಕಾಂಬಾ ದೇಗುಲದಲ್ಲಿ ಬೆಳಗ್ಗೆ 11ಕ್ಕೆ ಅಭಿನಂದನಾ ಸಮಾರಂಭ ನಡೆಯಲಿದೆ.ಕೆ.ಎಸ್‌.ಗುರುಮೂರ್ತಿ, ಬಿಜೆಪಿ ಮುಖಂಡ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment