ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹಳೆ ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಣೆ ಮಾಡಿದ, ಟ್ರಾಫಿಕ್ ಠಾಣೆ ಎಎಸ್ಐ ಮತ್ತು ಆಟೋ ಚಾಲಕರನ್ನು ಸನ್ಮಾನಿಸಲಾಯಿತು. ಶಿವಮೊಗ್ಗ NSUI ಘಟಕದ ವತಿಯಿಂದ ಸನ್ಮಾನ ಕಾರ್ಯ ನಡೆಸಲಾಯಿತು.
ಪೂರ್ವ ಸಂಚಾರಿ ಠಾಣೆ ಆವರಣದಲ್ಲಿ ಎಎಸ್ಐ ಶ್ರೀನವಾಸ್, ಆಟೋ ಚಾಲಕರಾದ ಅರ್ಜುನ್ ಮತ್ತು ಕಾಂತ ಅವರನ್ನು ಸನ್ಮಾನಿಸಲಾಯಿತು.
ಗುರುವಾರ ರಾತ್ರಿ ಮಂಜುನಾಥ ಎಂಬಾತ ಹಳೆ ಸೇತುವೆ ಮೇಲಿಂದ ತುಂಗಾ ಹೊಳೆಗೆ ಜಿಗಿದಿದ್ದ. ಆತ್ಮಹತ್ಯೆಗೆ ಯತ್ನಿಸಿದ್ದ ಈತ ಸೇತುವೆಯಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ. ಇದನ್ನು ಗಮನಿಸಿದ ಎಎಸ್ಐ ಶ್ರೀನಿವಾಸ್, ಆಟೋ ಚಾಲಕರಾದ ಅರ್ಜುನ್ ಮತ್ತು ಕಾಂತಾ ಅವರು ಮಂಜುನಾಥನನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದರು.
ಈ ಹಿನ್ನೆಲೆಯಲ್ಲಿ NSUI ಸಂಘಟನೆ ವತಿಯಿಂದ ಮೂವರನ್ನು ಸನ್ಮಾನಿಸಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಿರಂಜೀವಿ ಬಾಬಣ್ಣ, ರಾಜ್ಯ NSUI ಕಾರ್ಯದರ್ಶಿ ಎಚ್.ಎಸ್ ಬಾಲಾಜಿ, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜು ಪುರಲೆ, ಪ್ರಮುಖರಾದ ಅನ್ನು, ಪ್ರಮೋದ್, ಸಂದೀಪ್ ಅಟೋಕ್, ಮಂಜು, ಲಕ್ಷ್ಮಣ್, ಗಿರೀಶ್, ಪದ್ಮನಾಭ್, ಚಂದನ್, ವಿಜಯ್ ಸೇರಿದಂತೆ ಹಲವರು ಇದ್ದರು.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






