
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರು ಐದು ದಿನಗದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಇವತ್ತು ತೀವ್ರ ಸ್ವರೂಪ ಪಡೆಯಿತು. ಪ್ರತಿಭಟನೆ ನಡೆಸುತ್ತಿದ್ದ ದಾದಿಯರು ಮತ್ತು ಸಿಬ್ಬಂದಿಗಳು ಅಸ್ವಸ್ಥರಾಗಿದ್ದು ತಕ್ಷಣವೇ ಅವರಿಗೆ ಅಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು.
ಹೊರಗುತ್ತಿಗೆ ನೌಕರರು ಇವತ್ತು ತಮ್ಮ ಚಳವಳಿಯನ್ನು ತೀವ್ರಗೊಳಿಸಿದ್ದು, ವಿದ್ಯಾರ್ಥಿ ಸಂಘಟನೆಯ ಮುಖಂಡ ವಿನಯ್ ರಾಜಾವತ್ ನೇತೃತ್ವದಲ್ಲಿ ರಕ್ತಕ್ರಾಂತಿ ಚಳವಳಿಗೆ ಕರೆ ನೀಡಲಾಗಿತ್ತು. ಇದರ ಅಂಗವಾಗಿಯೇ ಚಳವಳಿವಲ್ಲಿ ಭಾಗವಹಿಸಿದ್ದವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರ ಭಾವಚಿತ್ರಗಳಿಗೆ ಹಾಲಿನ ಅಭಿಷೇಕ, ಹೂ ಹಾಕುವ ಮೂಲಕ ವಿನೂತನ ಚಳವಳಿ ನಡೆಸಿದರು.

ರಕ್ತದಿಂದ ಪಾದಪೂಜೆ
ಹೂ, ಹಾಲಿನ ಅಭಿಷೇಕದ ಜೊತೆಗೆ ಸಿಎಂ, ಸಚಿವರು, ಸಂಸದರ ಭಾವಚಿತ್ರಕ್ಕೆ ರಕ್ತದ ಅಭಿಷೇಕ ಮಾಡಲು ಮುಂದಾದರು. ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ರಕ್ತದ ಅಭಿಷೇಕ ಮಾಡುವುದು ಸರಿಯಲ್ಲ ಎಂದರು. ಈ ವೇಳೆ ವಿದ್ಯಾರ್ಥಿ ಸಂಘಟನೆ ಮುಖಂಡ ವಿನಯ್ ರಾಜಾವತ್ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ತಳ್ಳಾಟ, ನೂಕಾಟ, ಅಸ್ವಸ್ಥ
ಈ ವೇಳೆ ಪೊಲೀಸರು ಮತ್ತು ಪ್ರತಿಭಟಕಾರರ ನಡುವೆ ನೂಕಾಟ ತಳ್ಳಾಟವಾಯಿತು. ಇದರಿಂದ ಪ್ರತಿಭಟನಾನಿರತರು ಅಸ್ವಸ್ಥರಾದರು. ಅವರಿಗೆ ಪ್ರತಿಭಟನಾ ಸ್ಥಳದಲ್ಲೇ ಚಿಕಿತ್ಸೆ ನೀಡಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






