ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರು ಐದು ದಿನಗದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಇವತ್ತು ತೀವ್ರ ಸ್ವರೂಪ ಪಡೆಯಿತು. ಪ್ರತಿಭಟನೆ ನಡೆಸುತ್ತಿದ್ದ ದಾದಿಯರು ಮತ್ತು ಸಿಬ್ಬಂದಿಗಳು ಅಸ್ವಸ್ಥರಾಗಿದ್ದು ತಕ್ಷಣವೇ ಅವರಿಗೆ ಅಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು.
ಹೊರಗುತ್ತಿಗೆ ನೌಕರರು ಇವತ್ತು ತಮ್ಮ ಚಳವಳಿಯನ್ನು ತೀವ್ರಗೊಳಿಸಿದ್ದು, ವಿದ್ಯಾರ್ಥಿ ಸಂಘಟನೆಯ ಮುಖಂಡ ವಿನಯ್ ರಾಜಾವತ್ ನೇತೃತ್ವದಲ್ಲಿ ರಕ್ತಕ್ರಾಂತಿ ಚಳವಳಿಗೆ ಕರೆ ನೀಡಲಾಗಿತ್ತು. ಇದರ ಅಂಗವಾಗಿಯೇ ಚಳವಳಿವಲ್ಲಿ ಭಾಗವಹಿಸಿದ್ದವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರ ಭಾವಚಿತ್ರಗಳಿಗೆ ಹಾಲಿನ ಅಭಿಷೇಕ, ಹೂ ಹಾಕುವ ಮೂಲಕ ವಿನೂತನ ಚಳವಳಿ ನಡೆಸಿದರು.

ರಕ್ತದಿಂದ ಪಾದಪೂಜೆ
ಹೂ, ಹಾಲಿನ ಅಭಿಷೇಕದ ಜೊತೆಗೆ ಸಿಎಂ, ಸಚಿವರು, ಸಂಸದರ ಭಾವಚಿತ್ರಕ್ಕೆ ರಕ್ತದ ಅಭಿಷೇಕ ಮಾಡಲು ಮುಂದಾದರು. ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ರಕ್ತದ ಅಭಿಷೇಕ ಮಾಡುವುದು ಸರಿಯಲ್ಲ ಎಂದರು. ಈ ವೇಳೆ ವಿದ್ಯಾರ್ಥಿ ಸಂಘಟನೆ ಮುಖಂಡ ವಿನಯ್ ರಾಜಾವತ್ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ತಳ್ಳಾಟ, ನೂಕಾಟ, ಅಸ್ವಸ್ಥ
ಈ ವೇಳೆ ಪೊಲೀಸರು ಮತ್ತು ಪ್ರತಿಭಟಕಾರರ ನಡುವೆ ನೂಕಾಟ ತಳ್ಳಾಟವಾಯಿತು. ಇದರಿಂದ ಪ್ರತಿಭಟನಾನಿರತರು ಅಸ್ವಸ್ಥರಾದರು. ಅವರಿಗೆ ಪ್ರತಿಭಟನಾ ಸ್ಥಳದಲ್ಲೇ ಚಿಕಿತ್ಸೆ ನೀಡಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






