ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 FEBRURARY 2023
SHIMOGA : ಕಾಲೇಜು ವಿದ್ಯಾರ್ಥಿಗಳ ಕನ್ನಡ ಪ್ರೇಮವನ್ನು ಬಿಂಬಿಸುವ ಕ್ಯಾಂಪಸ್ ಕ್ರಾಂತಿ ಸಿನಿಮಾ (film) ಫೆ.24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದರ ಪ್ರಮೋಷನ್ ಗಾಗಿ ಚಿತ್ರತಂಡ ಶಿವಮೊಗ್ಗಕ್ಕೆ ಆಗಮಿಸಿತ್ತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮತ್ತು ನಿರ್ಮಾಪಕ ಸಂತೋಷ್ ಕುಮಾರ್, ಗಡಿಭಾಗದಲ್ಲಿ ಕನ್ನಡದ ಸಮಸ್ಯೆಯನ್ನು ಸಿನಿಮಾ ಪ್ರತಿಬಿಂಬಿಸಲಿದೆ. ಕಾಲೇಜು ವಿದ್ಯಾರ್ಥಿಗಳು ಕ್ರಾಂತಿ ಸೃಷ್ಟಿಸುವ ಸಿನಿಮಾ (film) ಇದಾಗಿದೆ. ಗಡಿಭಾಗದ ರಾಂಪುರ ಎಂಬ ಕಾಲ್ಪನಿಕ ಊರಿನಲ್ಲಿ 21 ವರ್ಷದಿಂದ ರಾಜ್ಯೋತ್ಸವ ಆಚರಣೆ ನಿಂತಿರುತ್ತದೆ. ಅದನ್ನು ಪುನಾರಂಭ ಮಾಡಲಾಗುತ್ತೆದೆ. ವಿದ್ಯಾರ್ಥಿಗಳು ಹೇಗೆ ಆಚರಣೆ ಮಾಡುತ್ತಾರೆ ಎಂಬುದನ್ನು ತೋರಿಸಲಾಗಿದೆ ಎಂದರು.
ನಾಯಕ ನಟ ಆರ್ಯ, ನಟಿ ಈಶಾನಾ ಮಾತಾಡಿ, ಇದು ಕೌಟುಂಬಿಕ ಸಿನಿಮಾ. ಎಲ್ಲರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಟಿ ಪ್ರೇಮಾ, ‘ಶ್ರೀಗಂಧದ ಗೊಂಬೆ’ಯ ಹಾಡಿಗೆ ಜನರು ಫಿದಾ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು
ಪುನೀತ್ ರಾಜಕುಮಾರ್ ಅಭಿನಯದ ಬಿಂದಾಸ್, ಯಶ್ ನಟಿಸಿದ್ದ ಗೂಗ್ಲಿ ಚಿತ್ರಗಳನ್ನು ಸಂತೋಷ್ ಕುಮಾರ್ ಅವರು ನಿರ್ದೇಶಿಸಿದ್ದರು. ಕ್ಯಾಂಪಸ್ ಕ್ರಾಂತಿ ಸಿನಿಮಾಗೆ ಅವರೆ ಆಕ್ಷನ್ ಕಟ್ ಹೇಳಿದ್ದಾರೆ. ವಿ.ಮನೋಹರ್ ಸಂಗೀತ, ಫ್ಯಾಷನ್ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ. ನಟರಾದ ಕೀರ್ತಿರಾಜ್, ವಾಣಿಶ್ರೀ, ನಂದಗೋಪಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ.
ನಟ ರಣವೀರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



