ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಹುಣಸೋಡು, ಕಲ್ಲು ಗಂಗೂರು ಗ್ರಾಮದಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಜನವರಿ 29ಕ್ಕೆ ಅಂತಿಮ ವಿಚಾರಣೆ ಇತ್ತು. ಅಷ್ಟರಲ್ಲಿ ಈ ಘೋರ ಅವಘಡ ಸಂಭವಿಸಿದೆ.
ಕಲ್ಲು ಗಂಗೂರು ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಅದೆ ಗ್ರಾಮದ ಸಂದೀಪ್ ಎಂಬುವವರು ಲೋಕಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಈ ತಿಂಗಳ ಕೊನೆಯಲ್ಲಿ ಅಂತಿಮ ವಿಚಾರಣೆ ನಡೆಯಬೇಕಿದೆ.
ಜವಾಬ್ದಾರಿ ಹೊರಲು ಸಿದ್ಧವಿಲ್ಲ
ಅಕ್ರಮ ಕಲ್ಲು ಗಣಿಗಾರಿಗೆ ವಿರುದ್ಧ ಪೊಲೀಸರಿಗೆ ದೂರು ನೀಡಿದರೆ, ಖನಿಜ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ನೀಡುವಂತೆ ತಿಳಿಸುತ್ತಾರೆ. ಆ ಇಲಾಖೆಗೆ ದೂರು ನೀಡಿದರೆ ಮತ್ತೊಬ್ಬರ ಮೇಲೆ ಜವಾಬ್ದಾರಿ ಹೊರಿಸುತ್ತಾರೆ. ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸುತ್ತಾರೆ. ಆದರೆ ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಂದೀಪ್ ದೂರುತ್ತಾರೆ.
ಲೋಕಾಯುಕ್ತಕ್ಕೆ ದೂರು
ಸಂದೀಪ್ ಅವರು 2013ರಲ್ಲಿ ಲೋಕಯುಕ್ತಕ್ಕೆ ದೂರು ನೀಡಿದ್ದರು. ಅಕ್ರವಾಗಿ ಗಣಿಗಾರಿಕೆ ನಡೆಯುತ್ತಿದ್ದರೂ, ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದರು. ಆದರೆ ಈ ವೇಳೆಗೆ ಅಧಿಕಾರಿಗಳು ಸಂದೀಪ್ ಅವರನ್ನು ಭೇಟಿಯಾಗಿ ದೂರು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ತಮ್ಮ ಪ್ರಮೋಷನ್ಗೆ ತೊಂದರೆ ಆಗಲಿದೆ ಎಂದು ಅಧಿಕಾರಿಗಳು ನೆಪವೊಡ್ಡಿದ್ದರು ಎಂದು ಸಂದೀಪ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳೀಯ ಜನರಲ್ಲಿ ಆತಂಕ
ಗಣಿಗಾರಿಕೆ ನಡೆಸುತ್ತಿರುವವರಿಗೆ ರಾಜಕೀಯ ಪ್ರಭಾವವಿದೆ. ಇದೆ ಕಾರಣಕ್ಕೆ ಗಣಿಗಾರಿಕೆ ನಡೆಸುವವರ ವಿರುದ್ಧ ದೂರು ನೀಡಲು ಹೆದರುತ್ತಿದ್ದಾರೆ ಅನ್ನುವ ಸಂದೀಪ್, ತಮ್ಮ ಮನೆಯಲ್ಲೂ ಇದೆಲ್ಲ ಬೇಡ ಸುಮ್ಮನಿರು ಎಂದು ಹೇಳುತ್ತಿದ್ದಾರೆ ಎಂದು ತಿಳಿಸುತ್ತಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






