ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಸರ್ಕಾರಿ ಗೌರವದೊಂದಿಗೆ ಮಂಜುನಾಥ್‌ ಅಂತ್ಯಕ್ರಿಯೆ, ಚಿತಾಗಾರದಲ್ಲಿ ಏನೆಲ್ಲ ಆಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿ ವೇಳೆ ಸಾವನ್ನಪ್ಪಿದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ ಅವರ ಅಂತ್ಯಕ್ರಿಯೆ (Final Rites) ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಪುತ್ರ ಅಭಿಜಯ್‌ ಮಂಜುನಾಥ್‌ ಅವರ ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.

ಧಾರ್ಮಿಕ ವಿಧಿವಿಧಾನ, ಸರ್ಕಾರಿ ಗೌರವ

ಅಂತ್ಯಕ್ರಿಯೆಗು ಮುನ್ನ ರೋಟರಿ ಚಿತಾಗಾರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಯತು. ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ನಮನ ಸಲ್ಲಿಸಿದರು. ರಾಜ್ಯ ಸರ್ಕಾರದ ವತಿಯಿಂದ ಸಚಿವ ಮಧು ಬಂಗಾರಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗ ಸಿಟಿಯಲ್ಲಿ ಮಂಜುನಾಥ ರಾವ್‌ ಅಂತಿಮ ಯಾತ್ರೆ, ಹೇಗಿತ್ತು? ಯಾರೆಲ್ಲ ಇದ್ದರು?

ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು. ಗುಂಡಾ ಭಟ್ಟರ ನೇತೃತ್ವದಲ್ಲಿ ನಾರಾಯಣ ಬಲಿ ಹೋಮ ನಡೆಸಲಾಯಿತು. ಆ ನಂತರ ಪುತ್ರ ಅಭಿಜಯ್‌, ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಶ (Final Rites) ಮಾಡಿದರು.

State-government-respect-for-Manjunatha-Rao-in-shimoga.
ಸರ್ಕಾರಿ ಗೌರವದೊಂದಿಗೆ ಮಂಜುನಾಥ ರಾವ್‌ ಅಂತ್ಯಕ್ರಿಯೆ.
ಮಂಜುನಾಥ ರಾವ್‌ ಪತ್ನಿ ಪಲ್ಲವಿ ಅವರಿಗೆ ಸಚಿವ ಮಧು ಬಂಗಾರಪ್ಪ ಸಾಂತ್ವನ ಹೇಳಿದರು.
ರೋಟರಿ ಚಿತಾಗಾರದಲ್ಲಿ ಮಂಜುನಾಥ ರಾವ್‌ ಪತ್ನಿ ಪಲ್ಲವಿ ಅವರಿಗೆ ಸಚಿವ ಮಧು ಬಂಗಾರಪ್ಪ ಸಾಂತ್ವನ ಹೇಳಿದರು.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment