ಶಿವಮೊಗ್ಗ: ಆಂಬುಲೆನ್ಸ್ (Ambulance) ತಡೆದು ತಪಾಸಣೆ ಮಾಡಿದಾಗ ಚಾಲಕ ಮದ್ಯ ಸೇವಿಸಿರುವುದು ಮತ್ತು ವಾಹನಕ್ಕೆ ಇನ್ಸುರೆನ್ಸ್ ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಆಂಬುಲೆನ್ಸ್ ಚಾಲಕನಿಗೆ ₹13,000 ದಂಡ ವಿಧಿಸಲಾಗಿದೆ.
ಶಿವಮೊಗ್ಗ ನಗರದ ಐಬಿ ಸರ್ಕಲ್ ಬಳಿ ಸಂಚಾರ ಪೊಲೀಸರು ವಾಹನಗಳ ತಪಾಸಣೆ ವೇಳೆ ಆಂಬುಲೆನ್ಸ್ ಪರಿಶೀಲಿಸಿದ್ದರು. ಈ ವೇಳೆ ಆಂಬುಲೆನ್ಸ್ ಚಾಲಕ ಮದ್ಯ ಸೇವಿಸಿರುವುದು ಗೊತ್ತಾಗಿತ್ತು. ಅಲ್ಲದೆ ವಾಹನಕ್ಕೆ ಇನ್ಸುರೆನ್ಸ್ ಕೂಡ ಇರಲಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ಆಂಬುಲೆನ್ಸ್ ಚಾಲಕನಿಗೆ ದಂಡ ವಿಧಿಸಿದೆ. ಪಿಎಸ್ಐ ತಿರುಮಲೇಶ್, ಸಿಬ್ಬಂದಿ ಮಂಜುನಾಥ್, ಪ್ರವೀಣ್ ಪಾಟೀಲ್, ಪ್ರಶಾಂತ್, ದಿನೇಶ್ ಮತ್ತು ಹರೀಶ್ ತಪಾಸಣೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಕಟ್ಟಿಕನಾರು ಬಳಿ ಕಾಡು ಹಂದಿಗಳ ಹಾವಳಿ, ಅಡಿಕೆ ಸಸಿಗಳು ನಾಶ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200