ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 19 JULY 2023
SHIMOGA : ರಾತ್ರಿ ಗಸ್ತು ವೇಳೆ ಅನುಮಾನಾಸ್ಪದ ವ್ಯಕ್ತಿಯೊಬ್ಬನ ಬೆರಳಚ್ಚು (finger print) ಪಡೆದು ಪೊಲೀಸರು ಪರಿಶೀಲನೆ ನಡೆಸಿದಾಗ ಅಪರಾಧ ಹಿನ್ನೆಲೆ ಪತ್ತೆಯಾಗಿದೆ. ಕೂಲಂಕಷವಾಗಿ ಪರಿಶೀಲಿಸಿದಾಗ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ.

ದರೋಡೆ ಪ್ರಕರಣದ ಆರೋಪಿ ನವೀನ್ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹೇಗೆ ಸಿಕ್ಕಿಬಿದ್ದ ನವೀನ್ ನಾಯ್ಕ?
ದೊಡ್ಡಪೇಟೆ ಠಾಣೆ ಸಿಬ್ಬಂದಿ ಗಂಗಪ್ಪ ತುಂಗಲ್ ಅವರು ರಾತ್ರಿ ಗಸ್ತು ನಡೆಸುತ್ತಿದ್ದರು. ಈ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದರು. ಮೊಬೈಲ್ ಕ್ರೈಮ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಮ್ ತಂತ್ರಾಂಶದ ಮೂಲಕ ಅನುಮಾನಾಸ್ಪದ ವ್ಯಕ್ತಿಗಳ ಫಿಂಗರ್ ಪ್ರಿಂಟ್ ಸ್ಕ್ಯಾನ್ (finger print) ಮಾಡಲಾಯಿತು. ಈ ವೇಳೆ ನವೀನ್ ನಾಯ್ಕನಿಗೆ ಅಪರಾಧ ಹಿನ್ನಲೆ ಇರುವುದು ಗೊತ್ತಾಗಿದೆ.

ವಿಚಾರಣೆ ನಡೆಸಿದಾಗ ದರೋಡೆ ಪ್ರಕರಣವೊಂದರಲ್ಲಿ ನವೀನ್ ನಾಯ್ಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅನ್ನುವುದು ತಿಳಿದು ಬಂದಿದೆ. ಅಲ್ಲದೆ ಆತನ ವಿರುದ್ಧ ವಾರಂಟ್ ಕೂಡ ಜಾರಿಯಾಗಿತ್ತು. ಕೂಡಲೆ ಆತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ – ಡೇಂಜರ್ ರೋಡ್ ಆಗುತ್ತಿದೆ ಶಿವಮೊಗ್ಗದ ಕಾಂಕ್ರಿಟ್ ರಸ್ತೆ, ಯಾಕೆ? ಇಲ್ಲಿದೆ 4 ಪ್ರಮುಖ ಪಾಯಿಂಟ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






