| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020
ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಇರುವ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೆಲವೇ ನಿಮಿಷದಲ್ಲಿ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಮೂವರ ಪ್ರಾಣ ಉಳಿದಿದೆ.

ಅಗ್ನಿ ಅವಘಡಕ್ಕೆ ಕಾರಣವೇನು?
ದೇಗುಲದ ಮುಂದೆ ಇರುವ ಮಂಡಕ್ಕಿ ಅಂಗಡಿಯಲ್ಲಿ ರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕಿಟ್’ನಿಂದಾಗಿ ಬೆಂಕಿ ಹೊತ್ತುಕೊಂಡಿದೆ ಎಂದು ತಿಳಿದು ಬಂದಿದೆ. ಕೆಲವೇ ನಿಮಿಷದಲ್ಲಿ ಬೆಂಕಿ ಜೋರಾಗಿ ಹೊತ್ತು ಉರಿದಿದೆ. ಇದರಿಂದ ಅಂಗಡಿಯಲ್ಲಿದ್ದ ಎರಡು ಟಿವಿ, ಫ್ರಿಡ್ಜ್ ಸೇರಿದಂತೆ ಹಲವು ವಸ್ತುಗಳು ಧಗಧಗ ಹೊತ್ತು ಉರಿದಿವೆ. ಸುಮಾರು ಏಳು ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಮೂವರ ಪ್ರಾಣ ಉಳಿಸಿದ ಅಗ್ನಿಶಾಮಕ ಸಿಬ್ಬಂದಿ
ಮಂಡಕ್ಕಿ ಅಂಗಡಿಯು ರಾಧಾಕೃಷ್ಣ ಕಾಮತ್ ಮತ್ತು ಗಣಪತಿ ಕಾಮತ್ ಎಂಬುವವರಿಗೆ ಸೇರಿದೆ. ಅಂಗಡಿ ಇದ್ದ ಕಟ್ಟಡದಲ್ಲೇ ಎರಡು ಕುಟುಂಬ ವಾಸವಿತ್ತು. ರಾಧಾಕೃಷ್ಣ ಕಾಮತ್ ಅವರು ಅಂಗಡಿಯ ಹಿಂಭಾಗದಲ್ಲಿ ವಾಸವಾಗಿದೆ. ಗಣಪತಿ ಕಾಮತ್ ಅವರ ಕುಟುಂಬ ಅಂಗಡಿಯ ಮೇಲ್ಭಾಗದಲ್ಲಿ ಇತ್ತು. ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ರಾಧಾಕೃಷ್ಣ ಕಾಮತ್ ಅವರ ಕುಟುಂಬ ಪಾರಾಗಿ ಬಂದಿದೆ.

ಆದರೆ ಕಟ್ಟಡದ ಮರದ ಮೆಟ್ಟಿಲುಗಳು ಸುಟ್ಟು ಹೋಗಿದ್ದರಿಂದ ಗಣಪತಿ ಕಾಮತ್ ಅವರ ಕುಟುಂಬ ಪಾರಾಗಲು ಪರದಾಡಬೇಕಾಯಿತು. ಕೊನೆಗೆ ಅಗ್ನಿಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಗಣಪತಿ ಕಾಮತ್, ಪತ್ನಿ ಆಶಾ ಕಾಮತ್, ಮಗಳು ಸೌಮ್ಯ ಅವರನ್ನು ರಕ್ಷಿಸಲಾಗಿದೆ.
ಅಗ್ನಿಶಾಮಕ ದಳದ ಡಿಎಫ್ಒ ಅಶೋಕ್ ಕುಮಾರ್, ಸಿಬ್ಬಂದಿಗಳಾದ ಹುಲಿಯಪ್ಪ, ಬಿ.ಟಿ.ನಾಗೇಶ್, ಆನಂದಪ್ಪ, ವಿಷ್ಣುನಾಯ್ಕ್, ವಿನಯ್ ಕುಮಾರ್, ಪೊಲೀಸ್ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()