ಶಿವಮೊಗ್ಗ ಲೈವ್.ಕಾಂ | SHIMOGA | 25 ಅಕ್ಟೋಬರ್ 2019
ಕೆಸರುಗದ್ದೆಯಂತಾದ ರಸ್ತೆಯಲ್ಲಿ ಸಸಿ ನೆಟ್ಟರು..! ರಸ್ತೆ ಗುಂಡಿಯಲ್ಲಿದ್ದ ನೀರಿಗೆ ಕಲರ್ ಕಲರ್ ಮೀನು ಬಿಟ್ಟರು..! ಗಾಳ ಹಾಕಿ ದೊಡ್ಡ ದೊಡ್ಡ ಮೀನು ಹಿಡಿದು ಘೋಷಣೆ ಕೂಗಿದರು..!
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ ಜಿಲ್ಲೆಯಾದ್ಯಂತ ರಸ್ತೆಗಳು ಗುಂಡಿ ಬಿದ್ದಿವೆ. ಇದನ್ನು ಮುಚ್ಚಲು ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ, ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಮಥುರಾ ಪ್ಯಾರಡೈಸ್ ಪಕ್ಕದಲ್ಲಿ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಸಸಿ ನೆಟ್ಟರು, ಗುಂಡಿಯಲ್ಲಿ ತುಂಬಿದ್ದ ಮಳೆ ನೀರಲ್ಲಿ ಮೀನು ಬಿಟ್ಟರು, ಗಾಳ ಹಾಕಿ ಮೀನು ಹಿಡಿಯುವಂತೆ ನಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್ ರಾಜಾವತ್, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಭಾರಿ ಗೋಲ್ಮಾಲ್ ಆಗಿದೆ. ಅಧಿಕಾರಿಗಳು, ರಾಜಕಾರಣಿಗಳ ವಿರುದ್ಧ ತನಿಖೆ ನಡೆಸಬೇಕು. ಇನ್ನೊಂದು ವಾರದಲ್ಲಿ ಜಿಲ್ಲೆಯಾದ್ಯಂತ ರಸ್ತೆಗಳನ್ನು ರಿಪೇರಿ ಮಾಡಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರ ಮತ್ತು ಜಿಲ್ಲಾಡಳಿತವೆ ಹೊಣೆಯಾಗಲಿದೆ ಎಂದು ಎಚ್ಚರಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]