| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 20 MARCH 2023
SHIMOGA : ಇನ್ನೊಂದು ವಾರದಲ್ಲಿ ಶಿವಮೊಗ್ಗದಿಂದ ವಿಮಾನಯಾನ (Flight Service) ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
![]()
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಗು ಮುನ್ನ ವಿಮಾನ ಹಾರಾಟ (Flight Service) ಆರಂಭವಾಗಬೇಕು ಎಂಬ ಒತ್ತಾಸೆ ಇತ್ತು. ಅದರಂತೆ ಇನ್ನೊಂದು ವಾರದೊಳಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಶುರುವಾಗುವ ಸಂಭವವಿದೆ ಎಂದು ತಿಳಿಸಿದರು.
ಪ್ರತಿ ಪ್ರಯಾಣಿಕನಿಗೆ 500 ರೂ. ಸಬ್ಸಿಡಿ
ಪ್ರಸ್ತುತ ಶಿವಮೊಗ್ಗ – ಬೆಂಗಳೂರು ನಡುವೆ ಪ್ರತಿದಿನ ವಿಮಾನ ಹಾರಾಟ ಆರಂಭವಾಗಲಿದೆ. ಮುಂದೆ ಸರ್ವೆ ನಡೆಸಿ, ಬೇರೆ ಪ್ರದೇಶಗಳಿಗೆ ವಿಮಾನಯಾನ ಪ್ರಾರಂಭಿಸುವ ನಿರೀಕ್ಷೆ ಇದೆ ಎಂದು ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೆ ಬರುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ಕಾರಣವೇನು?
ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನಯಾನ ಸೇವೆಗೆ ಪ್ರತಿ ಪ್ರಯಾಣಿಕನ ಟಿಕೆಟ್ ಗೆ 500 ರೂ. ಸಬ್ಸಿಡಿ ನೀಡಬೇಕು ಎಂಬ ಒತ್ತಾಯವಿದೆ. ಇದರಿಂದ ಪ್ರತಿದಿನ 73 ಸಾವಿರ ರೂ. ಹೊರೆಯಾಗಲಿದೆ. ವಾರ್ಷಿಕ ಅಂದಾಜು ಎರಡೂವರೆ ಕೋಟಿ ರೂ. ಹಣವನ್ನು ವಿಮಾನಯಾನ ಸಂಸ್ಥೆಗೆ ರಾಜ್ಯ ಸರ್ಕಾರ ನೀಡಬೇಕಾಗುತ್ತದೆ ಎಂದರು.
ಮೂರು ಹೈಟೆಕ್ ಅಗ್ನಿಶಾಮಕ ವಾಹನ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ಕೆಲವು ಮಾರ್ಪಾಡುಗಳು, ಸೂಚನೆಗಳನ್ನು ನೀಡಿ, ಒಂದು ತಿಂಗಳು ಗಡುವು ನೀಡಿತ್ತು. ಆ ಸೂಚನೆಗಳನ್ನು ಪಾಲಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಾತ್ಕಾಲಿಕವಾಗಿ ಅಗ್ನಿಶಾಮಕ ವಾಹನಗಳನ್ನು ಬಾಡಿಗೆಗೆ ಪಡೆಯಲಾಗಿತ್ತು. ಡಿಜಿಸಿಎ ಸೂಚನೆ ಬಳಿಕ ಮೂರು ಅಗ್ನಿಶಾಮಕ ವಾಹನಗಳನ್ನು ಖರೀದಿಸಲಾಗಿದೆ. ಪ್ರತಿ ವಾಹನಕ್ಕೆ ಐದರಿಂದ ಆರು ಕೋಟಿ ರೂ. ಆಗಲಿದೆ. ದುಬೈನಿಂದ ಈ ವಾಹನಗಳನ್ನು ಖರೀದಸಲಾಗಿದೆ ಎಂದರು.

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()