SHIVAMOGGA LIVE NEWS, 22 JANUARY 2025
ಶಿವಮೊಗ್ಗ : ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘದ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಜ.24 ರಿಂದ 26ರವರೆಗೆ ಮಲೆನಾಡ ಕರಕುಶಲ ಉತ್ಸವ ಮತ್ತು ಪುಷ್ಪಸಿರಿ ಫಲಪುಷ್ಪ (Flower Show) ಪ್ರದರ್ಶನ ಆಯೋಜಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಫಲಪುಷ್ಪ ಪ್ರದರ್ಶನದ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.
ಈ ಬಾರಿ 28 ಅಡಿ ಎತ್ತರದ ಕುಪ್ಪಳಿಯ ಕವಿ ಮನೆ, 16 ಅಡಿ ಎತ್ತರದ ಚಂದ್ರಗುತ್ತಿಗೆ ದೇಗುಲದ ಮಾದರಿಗಳನ್ನು ಹೂವಿನಿಂದ ಸೃಷ್ಟಿಸಲಾಗುತ್ತದೆ. ಬೆಂಗಳೂರಿನ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನದಲ್ಲಿ ಹೂವಿನಿಂದ ಕಲಾಕೃತಿ ಸೃಷ್ಟಿಸುವ ಕಲಾವಿದರೆ ಇಲ್ಲಿಯು ಮಾದರಿಗಳನ್ನು ಸಿದ್ಧಪಡಿಸಲಿದ್ದಾರೆ. – ಎನ್.ಹೇಮಂತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಹೂವಿನಲ್ಲಿ ಕವಿಮನೆ, ಚಂದ್ರಗುತ್ತಿ ದೇಗುಲ
ಕರಕುಶಲ ವಸ್ತುಗಳ ಪ್ರದರ್ಶನ
ಫಲಪುಷ್ಪ ಪ್ರದರ್ಶನದ ಒಳಾಂಗಣದಲ್ಲಿ ಇದೇ ಮೊದಲ ಬಾರಿಗೆ ವಿವಿಧ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿರುವ 100ಕ್ಕೂ ಹೆಚ್ಚು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಒಳಾಂಗಣದಲ್ಲಿ 35 ಸ್ಟಾಲ್ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ನರೇಗಾ ಯೋಜನೆ, ಚಂದ್ರಕಲಾ ಅವರ ಬೋನ್ಸಾಯ್ ಪ್ಲಾಂಟ್ಗಳ ಪ್ರದರ್ಶನವಿರಲಿದೆ ಎಂದರು.
ಹೊರಾಂಗಣದಲ್ಲಿ 25 ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಇಲ್ಲಿ ವಿವಿಧ ಕೃಷಿ ಉಪಕರಣ, ವಿವಿಧ ಸಂಸ್ಥೆಗಳು, ತಿನಿಸುಗಳ ಮಳಿಗೆ ಇರಲಿದೆ ಎಂದು ಹೇಮಂತ್ ಅವರು ಸುದ್ದಿಗೋಷ್ಠಿಯಲ್ಲಿ ಇರಲಿವೆ.
ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿರಲಿದೆ. ಮೂರು ದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಪ್ರದರ್ಶನ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಈ ಬಾರಿ ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದರು.ಸಾರ್ವಜನಿಕ ಪ್ರವೇಶ ಉಚಿತ
ಜಿಲ್ಲಾ ಪಂಚಾಯಿತಿ ಯೋಜನ ನಿರ್ದೇಶಕಿ ನಂದಿನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ.ಜೆ, ಜಿಲ್ಲಾ ಉದ್ಯಾನ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ » ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ