SHIVAMOGGA LIVE NEWS | 23 JANUARY 2023
SHIMOGA | ಎರಡು ವರ್ಷದ ಬಳಿಕ ಶಿವಮೊಗ್ಗ ನಗರದಲ್ಲಿ ಮತ್ತೆ ಫಲಪುಷ್ಪ ಪ್ರದರ್ಶನ (flower show) ಆಯೋಜಿಸಲಾಗುತ್ತಿದೆ. ಪ್ರದರ್ಶನದಲ್ಲಿ ಈ ಭಾರಿಯು ಹಲವು ವಿಶೇಷತೆಗಳು ಇರಲಿವೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಜಿ.ಎನ್.ಪ್ರಕಾಶ್ ಅವರು ತಿಳಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎನ್.ಪ್ರಕಾಶ್ ಅವರು, ಗಣರಾಜ್ಯೋತ್ಸವದ ಅಂಗವಾಗಿ ಪ್ರತಿ ವರ್ಷ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತದೆ. ಕೋವಿಡ್ ಹಿನ್ನೆಲೆ ಎರಡು ವರ್ಷ ಫಲಪುಷ್ಪ (flower show) ಪ್ರದರ್ಶನವಿರಲಿಲ್ಲ. ಈ ಭಾರಿ ಜ.26 ರಿಂದ ನಾಲ್ಕು ದಿನ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಭಾರಿ ಏನೆಲ್ಲ ವಿಶೇಷತೆ ಇರಲಿದೆ?

ರೈತರು, ಮಹಿಳೆಯರು, ಸಂಸ್ಥೆಗಳಿಗೆ ಸ್ಪರ್ಧೆ
ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ರೈತರು, ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆ ಆಯೋಜಿಸಲಾಗಿದೆ. ರೈತರಿಗೆ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶಿಕೆಗಳ ಸ್ಪರ್ಧೆ ಇದೆ. ಮಹಿಳೆಯರಿಗೆ ಹೂವಿನ ರಂಗೋಲಿ ಸ್ಪರ್ಧೆ ಇದೆ. ಹೂವು, ಮೊಗ್ಗು, ಎಲೆ, ಹಣ್ಣು, ಧಾನ್ಯಗಳನ್ನು ಬಳಸಿ ರಂಗೋಲಿ ರಚಿಸಬಹುದು. ಇನ್ನು, ಮನೆ, ಶಾಲೆ, ಅಂಗನವಾಡಿ, ಕಚೇರಿ, ಖಾಸಗಿ ಸಂಸ್ಥೆಗಳಿಗೆ ಕೈತೋಟ, ತಾರಸಿ ತೋಟ, ಉದ್ಯಾನವನಗಳ ಸ್ಪರ್ಧೆ ಆಯೋಜಿಸಲಾಗಿದೆ.

ಮಳಿಗೆಗಳು, ವಿವಿಧ ಸ್ಪರ್ಧೆ, ಆಹಾರ ಮೇಳ
ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಮಳಿಗೆಗಳನ್ನು ಹಾಕಲಾಗುತ್ತಿದೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ವತಿಯಿಂದ ವನ್ಯಜೀವಿ ಲೋಕದ ಪರಿಚಯದ ಮಳಿಗೆ. ವಿವಿಧ ಇಲಾಖೆಗಳ ಯೋಜನೆಗೆ ಸಂಬಂಧಿಸಿದ ಮಳಿಗೆಗಳು. ಸ್ವಸಹಾಯ ಸಂಘಗಳಿಗು ಕೂಡ ಮಳಿಗೆ ಸ್ಥಾಪಿಸಲಾಗುತ್ತಿದೆ. ಇದೆ ವೇಳೆ ಕೈತೋಟ, ಅಲಂಕಾರಿಕಾ ಹೂವುಗಳು, ಕುಬ್ಜಗಿಡಗಳು, ಅಣಬೆಗಳು, ಜೇನುಕೃಷಿ, 5 ಸಾವಿರ ವಿವಿಧ ಜಾತಿಯ ಆಕರ್ಷಕ ಹೂ ಕುಂಡಗಳ ಪ್ರಾತ್ಯಕ್ಷಿಕೆಗಳು ಇರಲಿವೆ.

ಫಲಪುಷ್ಪ ಪ್ರದರ್ಶನದ ಆವರಣದಲ್ಲಿ ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿ.ಎನ್.ಪ್ರಕಾಶ್ ತಿಳಿಸಿದರು.

ಪ್ರವೇಶ ಶುಲ್ಕ ಎಷ್ಟು?
ಫಲಪುಷ್ಪ ಪ್ರದರ್ಶನಕ್ಕೆ ಬರುವವರಿಗೆ ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ವಯಸ್ಕರಿಗೆ 10 ರೂ. ಮಕ್ಕಳಿಗೆ 5 ರೂ. ನಿಗದಿಪಡಿಸಲಾಗಿದೆ. ಶಾಲೆ ವತಿಯಿಂದ ಶಿಕ್ಷಕರ ಜೊತೆಗೆ ಬರುವ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ಜಿ.ಎನ್.ಪ್ರಶಾಶ್ ತಿಳಿಸಿದರು.
ಇದನ್ನೂ ಓದಿ – OLXನಲ್ಲಿ ಖರೀದಿಸುವಾಗ ಜೋಕೆ, ಶಿವಮೊಗ್ಗದ ಬ್ಯಾಂಕ್ ಉದ್ಯೋಗಿಗೆ ಲಕ್ಷ ಲಕ್ಷ ವಂಚನೆ, ಹೇಗಾಯ್ತು ಮೋಸ?
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



