SHIVAMOGGA LIVE NEWS | 30 DECEMBER 2022
ಶಿವಮೊಗ್ಗ : ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು. ಈ ಮೂಲಕ ಗುಜರಾತ್ ರಾಜ್ಯದ ಮಾದರಿಯನ್ನು ಅನುಸರಿಸಬೇಕು ಎಂದು ಸಂಯುಕ್ತ ಜನತಾದಳದ ಜಿಲ್ಲಾ ಘಟಕ ಆಗ್ರಹಿಸಿದೆ.
ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಗುಜರಾತ್ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ರೈತ ಸಹಕಾರಿ ಕೇಂದ್ರಗಳ ಮೂಲಕ ಕಾರ್ಖಾನೆಗಳನ್ನು ನಡೆಸಲಾಗುತ್ತಿದೆ. ಕಾರ್ಖಾನೆಯು ಕಬ್ಬು ಖರೀದಿಸಿದ 15 ದಿನದೊಳಗೆ ಸರ್ಕಾರ ನಿಗದಿಪಡಿಸಿದ ದರದ ಶೇ.82 ರಷ್ಟು ಹಣವನ್ನು ರೈತನ ಖಾತೆಗೆ ವರ್ಗಾಯಿಸಲಿದೆ. ಕಬ್ಬು ನುರಿಯುವ ಹಂಗಾಮು ಮುಗಿದ ಬಳಿಕ ಬಾಕಿ ಹಣವನ್ನು ಪಾವತಿ ಮಾಡಲಾಗುತ್ತಿದೆ. ಇದೆ ಮಾದರಿಯನ್ನು ರಾಜ್ಯದಲ್ಲಿಯು ಅನುಷ್ಠಾನಕ್ಕೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜ್ಯದಲ್ಲಿ 16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. 75 ಸಕ್ಕರೆ ಕಾರ್ಖಾನೆಗಳಿವೆ. ರೈತರಿಂದ ಕಬ್ಬು ಪಡೆದು ಸರಿಯಾದ ಸಮಯಕ್ಕೆ ಹಣ ಪಾವತಿ ಮಾಡುತ್ತಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಗುಜರಾತ್ ಮಾದರಿಯನ್ನು ಅನುಸರಿಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ, ಪೊಲೀಸ್ ಇಲಾಖೆಯಿಂದ 10 ಪಾಯಿಂಟ್ ಗೈಡ್ ಲೈನ್ ಬಿಡುಗಡೆ
ಲಂಚ ಮುಕ್ತ ಕರ್ನಾಟಕದ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ.ಪ್ರಭು, ಕಾರ್ಯದರ್ಶಿ ರವಿ, ಕೆ.ಆರ್.ಎಸ್ ಪಕ್ಷದ ಮಧು, ಶರತ್, ಅಯಾಜ್ ಪ್ರತಿಭಟನೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200