SHIVAMOGGA LIVE NEWS | 12 FEBRUARY 2024
SHIMOGA : ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಬಿಎಸ್ಸಿ ಅರಣ್ಯಶಾಸ್ತ್ರ ಪದವಿಧರರನ್ನು ಮಾತ್ರ ಪರಿಗಣಿಸಬೇಕು ಎಂದು ಆಗ್ರಹಿಸಿ ಅರಣ್ಯಶಾಸ್ತ್ರ ಪದವಿಧರರು ಮತ್ತು ವಿದ್ಯಾರ್ಥಿಗಳ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವಿಯನ್ನಷ್ಟೆ ಪರಿಗಣಿಸಬೇಕು. ಪಿಯುಸಿ ವಿಜ್ಞಾನ ವಿಷಯ ಮತ್ತು ಸಿಇಟಿಯಲ್ಲಿ ಉತ್ತಮ ಅಂಕ ಪಡೆದವರು ಅರಣ್ಯಶಾಸ್ತ್ರ ಅಧ್ಯಯನಕ್ಕೆ ಬರುತ್ತಾರೆ. ಪ್ರತಿಭಾನ್ವಿತ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ನೇಮಿಸಿವುದು ಸೂಕ್ತ ಎಂದು ಆಗ್ರಹಿಸಿದರು.
ಉಪ ವಲಯ ಅರಣ್ಯಾಧಿಕಾರಿಗಳ ಹುದ್ದೆಗಳಿಗೆ ಶೇ.50ರಷ್ಟು ಮುಂಬಡ್ತಿ ಮತ್ತು ಶೇ.50ರಷ್ಟು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆದರೆ ಆಡಳಿತ ಸುಧಾರಣಾ ಅಯೋಗದ ಅಧ್ಯಕ್ಷರಾಗಿದ್ದ ಹಿಂದಿನ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಸರ್ಕಾರಕ್ಕೆ ಕೆಲವು ಶಿಫಾರಸು ಮಾಡಿದ್ದಾರೆ. ಡಿವೈ ಆರ್ಎಫ್ಒ ಹುದ್ದೆಗೆ ಶೇ.100ರಷ್ಟು ಮುಂಬಡ್ತಿ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಈ ಶಿಫಾರಸು ಈ ಹುದ್ದೆ ಸೃಷ್ಟಿಸುವಾಗ ಇದ್ದ ಮೂಲ ಆಶಾಯಕ್ಕೆ ವಿರುದ್ಧವಾಗಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮೂಲಕ ಅರಣ್ಯಶಾಸ್ತ್ರ ಪದವಿಧರರು ಮತ್ತು ವಿದ್ಯಾರ್ಥಿಗಳ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ಇದನ್ನೂ ಓದಿ – VISL ಕಾರ್ಖಾನೆ ವಿಚಾರ, ದೆಹಲಿಗೆ ನಿಯೋಗ, 2 ಪ್ರಮುಖ ಬೇಡಿಕೆ ಈಡೇರಿಕೆಗೆ ಉಕ್ಕು ಪ್ರಾಧಿಕಾರಕ್ಕೆ ಒತ್ತಾಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200