
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ನೆಪದಲ್ಲಿ ಸಾಮಾನ್ಯ ಕಾಯಿಲೆ ಹೊಂದಿರುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿಲ್ಲ. ಹಾಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಐಸಿಯು ಕೊರತೆ ಇದೆ. ಕರೋನ ಪರೀಕ್ಷೆ ನೆಪದಲ್ಲಿ ಸಾಮಾನ್ಯ ರೋಗಿಗಳಿಗೂ ಚಿಕಿತ್ಸೆ ನೀಡುತ್ತಿಲ್ಲ. ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕಿದೆ. ಇಲ್ಲವಾದಲ್ಲಿ ಸಾವಿನ ಸಂಖ್ಯೆ ಹೆಚ್ಚಳ ಆಗುವ ಸಂಭವವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಆಸ್ಪತ್ರೆಗಳ ಸಂಖ್ಯೆ, ಬೆಡ್ ಸಂಖ್ಯೆ, ಐಸಿಯು ಮತ್ತು ಆಮ್ಲಜನಕ ಕೊರತೆ ನಿವಾರಿಸಬೇಕಿದೆ. ಜಿಲ್ಲೆಯಲ್ಲಿ ಕೊರೋನ ಪರೀಕ್ಷೆಯನ್ನು ಮತ್ತಷ್ಟು ವ್ಯಾಪಕಗೊಳಿಸಬೇಕು ಎಂದು ಪ್ರನನ್ನ ಕುಮಾರ್ ಅವರು ಸಿಎಂಗೆ ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






