SHIVAMOGGA LIVE | 11 JULY 2023
SHIMOGA : ಜೆ-ನರ್ಮ್ ಯೋಜನೆ ಅಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿದ್ದ ಸರ್ಕಾರಿ ಬಸ್ಸುಗಳು ಕಾಣಿಸುತ್ತಿಲ್ಲ. ಈ ಕುರಿತು ನೂತನ ಶಾಸಕ ಎಸ್.ಎನ್.ಚನ್ನಬಸಪ್ಪ ಗಮನ ಹರಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ಈ ಹಿಂದೆ ರಾಮಲಿಂಗಾರೆಡ್ಡಿ ಅವರು ಸಾರಿಗೆ ಸಚಿವರಾಗಿದ್ದಾಗ ಶಿವಮೊಗ್ಗ ನಗರಕ್ಕೆ ಸಾರಿಗೆ ಬಸ್ಸುಗಳನ್ನು ಮಂಜೂರು ಮಾಡಿದ್ದರು. ಈಗ ಒಂದೇ ಒಂದು ಬಸ್ ಕೂಡ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು.
ಈ ಕುರಿತು ಸಾರಿಗೆ ನಿಗಮದ ಅಧಿಕಾರಿಗಳನ್ನು ವಿಚಾರಿಸಿದಾಗ ಜೆ-ನರ್ಮ್ ಯೋಜನೆಯ ಬಸ್ಸುಗಳು ಶಿವಮೊಗ್ಗ – ಭದ್ರಾವತಿ, ತೀರ್ಥಹಳ್ಳಿ, ಸಾಗರ ಮಾರ್ಗದಲ್ಲಿ ಸಂಚರಿಸುತ್ತಿವೆ ಎಂದು ತಿಳಿಸುತ್ತಾರೆ. ನಗರ ಸಾರಿಗೆ ಬಸ್ಸುಗಳು ನಗರದಲ್ಲಿ ಓಡಾಡುವಂತೆ ಶಾಸಕರು ನೋಡಿಕೊಳ್ಳಬೇಕು. ಎಲ್ಲಾ ಲಾಬಿಗಳನ್ನು ಮೀರಿ ಶಾಸಕರು ಕೆಲಸ ಮಾಡಬೇಕು ಎಂದರು.
ಇದನ್ನೂ ಓದಿ – ಚೋರಡಿ ಗ್ರಾಮಸ್ಥರಿಗೆ ಪೊಲೀಸ್ ಇಲಾಖೆಯಿಂದ ಸನ್ಮಾನ, ಪ್ರಶಂಸನಾ ಪತ್ರ, ಸನ್ಮಾನಕ್ಕೆ ಕಾರಣವೇನು?
ಮೇಲ್ಸೇತುವೆ ಕಾಮಗಾರಿ ವಿಳಂಬ, ಸಮಸ್ಯೆ ಹೆಚ್ಚಳ
ನಗರದಲ್ಲಿ ನಡೆಯುತ್ತಿರುವ ಎರಡು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಇದರಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸರ್ವಿಸ್ ರಸ್ತೆ ವ್ಯವಸ್ಥೆ ಸಮರ್ಪಕವಾಗಿ ಇರದಿರುವುದರಿಂದ ವಾಹನಗಳು ಸುಗಮವಾಗಿ ಸಂಚರಿಸಲು ಆಗುತ್ತಿಲ್ಲ. ಈ ಕುರಿತು ಶಾಸಕರು, ಅಧಿಕಾರಿಗಳು ಗಮನ ಹರಿಸಬೇಕು ಎಂದು ಅಗ್ರಹಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200