ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 11 JULY 2023
SHIMOGA : ಜೆ-ನರ್ಮ್ ಯೋಜನೆ ಅಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿದ್ದ ಸರ್ಕಾರಿ ಬಸ್ಸುಗಳು ಕಾಣಿಸುತ್ತಿಲ್ಲ. ಈ ಕುರಿತು ನೂತನ ಶಾಸಕ ಎಸ್.ಎನ್.ಚನ್ನಬಸಪ್ಪ ಗಮನ ಹರಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ಈ ಹಿಂದೆ ರಾಮಲಿಂಗಾರೆಡ್ಡಿ ಅವರು ಸಾರಿಗೆ ಸಚಿವರಾಗಿದ್ದಾಗ ಶಿವಮೊಗ್ಗ ನಗರಕ್ಕೆ ಸಾರಿಗೆ ಬಸ್ಸುಗಳನ್ನು ಮಂಜೂರು ಮಾಡಿದ್ದರು. ಈಗ ಒಂದೇ ಒಂದು ಬಸ್ ಕೂಡ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು.
ಈ ಕುರಿತು ಸಾರಿಗೆ ನಿಗಮದ ಅಧಿಕಾರಿಗಳನ್ನು ವಿಚಾರಿಸಿದಾಗ ಜೆ-ನರ್ಮ್ ಯೋಜನೆಯ ಬಸ್ಸುಗಳು ಶಿವಮೊಗ್ಗ – ಭದ್ರಾವತಿ, ತೀರ್ಥಹಳ್ಳಿ, ಸಾಗರ ಮಾರ್ಗದಲ್ಲಿ ಸಂಚರಿಸುತ್ತಿವೆ ಎಂದು ತಿಳಿಸುತ್ತಾರೆ. ನಗರ ಸಾರಿಗೆ ಬಸ್ಸುಗಳು ನಗರದಲ್ಲಿ ಓಡಾಡುವಂತೆ ಶಾಸಕರು ನೋಡಿಕೊಳ್ಳಬೇಕು. ಎಲ್ಲಾ ಲಾಬಿಗಳನ್ನು ಮೀರಿ ಶಾಸಕರು ಕೆಲಸ ಮಾಡಬೇಕು ಎಂದರು.
ಇದನ್ನೂ ಓದಿ – ಚೋರಡಿ ಗ್ರಾಮಸ್ಥರಿಗೆ ಪೊಲೀಸ್ ಇಲಾಖೆಯಿಂದ ಸನ್ಮಾನ, ಪ್ರಶಂಸನಾ ಪತ್ರ, ಸನ್ಮಾನಕ್ಕೆ ಕಾರಣವೇನು?
ಮೇಲ್ಸೇತುವೆ ಕಾಮಗಾರಿ ವಿಳಂಬ, ಸಮಸ್ಯೆ ಹೆಚ್ಚಳ
ನಗರದಲ್ಲಿ ನಡೆಯುತ್ತಿರುವ ಎರಡು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಇದರಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸರ್ವಿಸ್ ರಸ್ತೆ ವ್ಯವಸ್ಥೆ ಸಮರ್ಪಕವಾಗಿ ಇರದಿರುವುದರಿಂದ ವಾಹನಗಳು ಸುಗಮವಾಗಿ ಸಂಚರಿಸಲು ಆಗುತ್ತಿಲ್ಲ. ಈ ಕುರಿತು ಶಾಸಕರು, ಅಧಿಕಾರಿಗಳು ಗಮನ ಹರಿಸಬೇಕು ಎಂದು ಅಗ್ರಹಿಸಿದರು.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು






