ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 MARCH 2023
SHIMOGA : ಕಾಂಗ್ರೆಸ್ ಪಕ್ಷ ಪ್ರತಿಪಕ್ಷವಾಗಿ ಸಂಘಟಿತವಾಗಿ ಕೆಲಸ ಮಾಡದ ಕಾರಣ ತಾವು ಪಕ್ಷಕ್ಕೆ ರಾಜೀನಾಮೆ (RESIGNATION) ನೀಡುತ್ತಿರುವುದಾಗಿ ಮಲೆನಾಡು ರೈತ ಹೋರಾಟ ಸಮಿತಿ ಪ್ರಮುಖ ತಿ.ನಾ.ಶ್ರೀನಿವಾಸ್ ಘೋಷಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಹಣವಿದ್ದವರಿಗೆ ಮಾತ್ರ ಮಣೆ ಹಾಕುತ್ತಿದೆ. ಕಡಿಮೆ ಜನಸಂಖ್ಯೆ ಇರುವ ಸಮುದಾಯಗಳಿಗೆ, ಹಣವಿಲ್ಲದವರಿಗೆ ಬೆಲೆ ನೀಡುವುದಿಲ್ಲ. ಎಲ್ಲಾ ಪಕ್ಷಗಳು ಚುನಾವಣೆಯನ್ನು ವ್ಯಾಪಾರ ಮಾಡಿಕೊಂಡಿವೆ ಎಂದು ಆರೋಪಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ
ಶರಾವತಿ ಸಂತ್ರಸ್ತರು, ಬಗರ್ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡಿಸುವುದು ತಮ್ಮ ಗುರಿಯಾಗಿದ್ದು, ಮಲೆನಾಡು ರೈತ ಹೋರಾಟ ಸಮಿತಿಯ ಮೂಲಕ ಹೋರಾಟ ತೀವ್ರಗೊಳಿಸಲಿದ್ದೇನೆ. ಸಾಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕೆ ಇಳಿಯಲಿದ್ದೇನೆ ಎಂದರು.
ಇದನ್ನೂ ಓದಿ – ಗೋಪಿ ಸರ್ಕಲ್ ನಲ್ಲಿ ಡಿಜೆ, ರೈನ್ ಡಾನ್ಸ್, ಕುಣಿದು ಕುಪ್ಪಳಿಸಿದ ಶಿವಮೊಗ್ಗದ ಜನ, ಹೇಗಿತ್ತು ಸಡಗರ? ಫೋಟೊ ಸಹಿತ ರಿಪೋರ್ಟ್
ಕಾಂಗ್ರೆಸ್ ಪ್ರತಿಪಕ್ಷವಾಗಿ ತನ್ನ ಕೆಲಸ ಸರಿಯಾಗಿ ಮಾಡಿಲ್ಲ. ಭಟ್ಟಂಗಿಗಳಿಗೆ ಮಾತ್ರ ಬೆಲೆ ನೀಡುತ್ತಿದೆ. ಹಲವು ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದವರನ್ನು ಮೂಲೆ ಗುಂಪು ಮಾಡಿ, ಇತ್ತೀಚಿಗೆ ಪಕ್ಷಕ್ಕೆ ಸೇರಿದವರಿಗೆ ಉನ್ನತ ಹಂತದ ಸ್ಥಾನಮಾನ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ (RESIGNATION) ನೀಡಿರುವುದಾಗಿ ತಿಳಿಸಿದರು.
ಅಭಯಾರಣ್ಯದ ಹೆಸರಿನಲ್ಲಿ, ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ಈ ಕೂಡಲೆ ನಿಲ್ಲಿಸಬೇಕು. ಜಿಲ್ಲೆಯ ಜನಪ್ರತಿನಿಧಿಗಳ ಈ ಬಗ್ಗೆ ಧ್ವನಿ ಎತ್ತದೆ ಮೌನ ವಹಿಸಿರುವುದು ಖಂಡನೀಯ ಎಂದರು.
ರಾಜಕೀಯವಾಗಿ ಉತ್ತಮ ಬೆಳವಣಿಗೆಯಲ್ಲ
ಟಿಕೆಟ್ ಅರ್ಜಿ ಸಲ್ಲಿಸಿದವರನ್ನು ಪ್ರತ್ಯೇಕವಾಗಿ ಕರೆದು ಚುನಾವಣೆಯಲ್ಲಿ ಎಷ್ಟು ಹಣ ಖರ್ಚು ಮಾಡುತ್ತೀರಿ ಎಂಬುದನ್ನು ಪ್ರಶ್ನಿಸುತ್ತಾರೆ. ಇದು ರಾಜಕೀಯದಲ್ಲಿ ಉತ್ತಮ ಬೆಳವಣಿಗೆಯಲ್ಲ ಎಂದ ತಿ.ನಾ.ಶ್ರೀನಿವಾಸ್ ತಾವು ಯಾರ ಮನವೊಲಿಕೆಗೂ ಯಾವುದೇ ಕಾರಣಕ್ಕೂ ನಿರ್ಧಾರ ಬದಲಿಸುವುದಿಲ್ಲ ಎಂದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















