ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸೈನಿಕರ ಅಸಮಾಧಾನದ ಬಳಿಕ ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಯುದ್ದ ಟ್ಯಾಂಕರ್ಗೆ (Tanker) ರಾತ್ರೋರಾತ್ರಿ ಹೂವಿನ ಅಲಂಕಾರ ಮಾಡಿ ಆಯುಧ ಪೂಜೆ ನಡೆಸಲಾಗಿದೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡಿದ್ದಾರೆ.
ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಟಿ-55 ಯುದ್ದ ಟ್ಯಾಂಕರ್ ಸ್ಥಾಪಿಸಲಾಗಿದೆ. ಇಂದು ಆಯುಧ ಪೂಜೆ ಸಂದರ್ಭ ಈ ಟ್ಯಾಂಕರ್ಗೆ ಮಹಾನಗರ ಪಾಲಿಕೆ ವತಿಯಿಂದ ಪೂಜೆ ನೆರವೇರಿಸದೆ ದಸರಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಇದು ಮಾಜಿ ಸೈನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸೈನಿಕರು ಪೋಸ್ಟ್ ಪ್ರಕಟಿಸಿ ಅಸಮಾಧಾನ ವ್ಯಕ್ತಪಡಿಸಿದರು. ಇದಾದ ಬಳಿಕ ಆತುರಾತುರವಾಗಿ ರಾತ್ರಿ 9.30ರ ಹೊತ್ತಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಟ್ಯಾಂಕರ್ಗೆ ಹೂವಿನ ಅಲಂಕಾರ ಮಾಡಿಸಲು ಆರಂಭಿಸಿದ್ದಾರೆ. ಕೋಟ್ಯಂತರು ರುಪಾಯಿಯಲ್ಲಿ ಶಿವಮೊಗ್ಗ ದಸರಾ ನೆರವೇರಿಸಲಾಗುತ್ತಿದೆ. ಆದರೆ ಯುದ್ದ ಟ್ಯಾಂಕರ್ಗೆ ಪೂಜೆ ಮಾಡಿಸದಷ್ಟು ನಿರ್ಲಕ್ಷ್ಯ ಸರಿಯೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಮತ್ತೊಂದು ರಸ್ತೆಯಲ್ಲಿ ಒನ್ ವೇ ಸಂಚಾರ, ಜಿಲ್ಲಾಧಿಕಾರಿ ಆದೇಶ



Tanker
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















