ವಿನೋಬನಗರ ಶಿವಾಲಯದಲ್ಲಿ ಇವತ್ತು ಉಚಿತ ಆರೋಗ್ಯ ತಪಾಸಣೆ, ತಜ್ಞ ವೈದ್ಯರು ಭಾಗಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HEALTH | 02 ಮೇ 2022

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕ ಮತ್ತು ಸೆಕ್ಯೂರ್ ಆಸ್ಪತ್ರೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ತಜ್ಞ ವೈದ್ಯರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶಿವಯೋಗಿ ಹಂಚಿನಮನೆ ಅವರು, ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಮೇ 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ವಿನೋಬನಗರ ಶಿವಾಲಯದಲ್ಲಿ ಮಧ್ಯಾಹ್ನ 2 ಗಂಟೆಗೆವರೆಗೆ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ತಜ್ಞ ವೈದ್ಯರು ಭಾಗಿ

ಆರೋಗ್ಯ ತಪಾಸಣಾ ಶಿಬಿರದಲ್ಲಿ ಸೆಕ್ಯೂರ್ ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸುತ್ತಿದ್ದಾರೆ. ಫಿಜಿಷಿಯನ್ ಡಾ.ಸೌರಬ್ ಹಿರೇಮಠ, ಶ್ವಾಸಕೋಶ ತಜ್ಞ ಡಾ. ಅಭಿಷೇಕ್ ನುಚ್ಚಿನ್, ಮೂಳೆ ಮತ್ತು ಕೀಲು ತಜ್ಞ ಡಾ. ಬಿ.ಸುರೇಶ್, ಮೂತ್ರಪಿಂಡ ತಜ್ಞ ಡಾ. ಕೆ.ಆರ್.ಹರೀಶ್, ಮಕ್ಕಳ ತಜ್ಞ ಡಾ. ವಿನಾಯಕ್ ಪಿ.ಹೆಗಡೆ,  ಸ್ತ್ರೀ ರೋಗ ತಜ್ಞರಾದ ಡಾ. ಕೆ.ಎಸ್.ಅಪರ್ಣಾ ಅವರು ಭಾಗವಹಿಸಲಿದ್ದಾರೆ.

ಪ್ರಮುಖರಾದ ಉಮಾ ಶಂಕರ್, ನಿತೀಶ್ ಕುಮಾರ್, ಉಮೇಶ್ ಕತ್ತಿ, ಶಿವಕುಮಾರ್, ಅಭಿಷೇಕ್, ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಸಿ.ಮಹೇಶ್ ಕುಮಾರ್ ಹಾಜರಿದ್ದರು.

ಇದನ್ನೂ ಓದಿ – ವಿಮಾನ ನಿಲ್ದಾಣದ ಹೆಸರಿನ ವಿಚಾರ, ಶಿವಮೊಗ್ಗದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಮಹತ್ವದ ಸಭೆ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2022

Leave a Comment