ಶಿವಮೊಗ್ಗ : ನವುಲೆಯ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಏ.26 ರಿಂದ 28ರವರೆಗೆ ವೈವಿಧ್ಯಮಯ ಹಣ್ಣುಗಳು (Fruits) ಮತ್ತು ಆಹಾರ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ.ಜಗದೀಶ್ ತಿಳಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ನವುಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೇಂದ್ರದ ಆವರಣದಲ್ಲಿ ಮೂರು ದಿನವೂ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಮೇಳ ನಡೆಯಲಿದೆ. ವೈವಿಧ್ಯಮಯ ಮಾವಿನ ಹಣ್ಣು, ಹಲಸು, ಬಾಳೆ ಹಾಗೂ ವಿವಿಧ ಜಾತಿಯ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಎಂದರು.

ಪ್ರದರ್ಶನದ ಏನೇನಿರುತ್ತೆ? ಇಲ್ಲಿದೆ ಹೈಲೈಟ್
ಮಲೆನಾಡಿನ ವಿಶಿಷ್ಟ ಸಿಹಿ ಖಾದ್ಯಗಳಾದ ತೊಡೆದೇವು, ಅಪ್ಪೆಮಿಡಿ, ಹಲಸು, ಬಾಳೆ, ಅನಾನಸ್, ಅಂಜೂರ, ಗೇರು, ಮುರುಗಲು, ಪುನರ್ಪುಳಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳು, ಸಿರಿಧಾನ್ಯ ಮತ್ತು ಸ್ಥಳೀಯ ವಿಶಿಷ್ಟ ಖಾದ್ಯಗಳು ಇರಲಿವೆ.
ಜೇನುತುಪ್ಪದ ಮೌಲ್ಯವರ್ಧಿತ ಉತ್ಪನ್ನ ಮತ್ತು ದಾವಣಗೆರೆ ಬೆಣ್ಣೆದೋಸೆ, ಹುಬ್ಬಳ್ಳಿ ಮಿರ್ಚಿ ಮಂಡಕ್ಕಿ, ಆಲೂ ಟ್ವಿಸ್ಟರ್ ಖಾದ್ಯಗಳು ಮೇಳದ ಪ್ರಮುಖ ಆಕರ್ಷಣೆ.
ಕರಿಮೆಣಸು, ಕೋಕಂ, ಏಲಕ್ಕಿ, ದಾಲ್ಚಿನಿ, ಬಿದಿರು, ಕಾಫಿ, ಪುನರ್ಪುಳಿ, ಗೋಡಂಬಿ ಸೇರಿದಂತೆ ವಿವಿಧ ತಳಿಯ 8 ಲಕ್ಷ ಸಸಿಗಳು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿವೆ.
ಹಣ್ಣುಗಳ ಉತ್ಪನ್ನಗಳಾದ ಜ್ಯೂಸ್, ಜ್ಯಾಮ್, ಜೇನು, ಇತರೆ ಉತ್ಪನ್ನಗಳೂ ದೊರೆಯಲಿವೆ.
ಮೇಳದಲ್ಲಿ ಹಣ್ಣಿನ ಸಸಿಗಳ ನರ್ಸರಿ, ಆಲಂಕಾರಿಕ ಗಿಡಗಳು, ತರಕಾರಿ ಮತ್ತು ಹೂವಿನ ಬೀಜಗಳು, ತಾರಸಿ / ಕೈತೋಟದ ಪರಿಕರಗಳ ಮಾರಾಟ ಮಳಿಗೆಗಳು, ಆಲಂಕಾರಿಕ ಮೀನುಗಳು, ಬಾಳೆಯ ನಾರು, ಬಿದರಿನ ನಾರು ಮತ್ತು ಮಣ್ಣಿನಿಂದ ತಯಾರಿಸಿದ ಹಲವು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ.
ಮೇಳದಲ್ಲಿ 150 ಮಳಿಗೆ
150ಕ್ಕೂ ಹೆಚ್ಚಿನ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ, ರುಚಿಕರ ಹಣ್ಣು (Fruits) ಹಾಗೂ ರೈತರಿಗೆ, ಸ್ವಸಹಾಯ ಗುಂಪುಗಳಿಗೆ, ಉದ್ದಿಮೆದಾರರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದು ಈ ಮೇಳದ ಉದ್ದೇಶ ಎಂದು ಕುಲಪತಿ ಆರ್.ಸಿ.ಜಗದೀಶ್ ತಿಳಿಸಿದರು.
ರಜತ ಮಹೋತ್ಸವದ ಅಂಗವಾಗಿ ತಾಂತ್ರಿಕ ಸಮಾವೇಶ, ಮಕ್ಕಳಿಗೆ, ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನ ಮತ್ತು ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಗುವುದು ಎಂದರು.
ಕುಲಸಚಿವ ಕೆ.ಸಿ.ಶಶಿಧರ್, ಕೃಷಿ ಮಹಾವಿದ್ಯಾಲಯದ ಡೀನ್ ಡಿ.ತಿಪ್ಪೇಶ, ಸಹ ಸಂಶೋಧನಾ ನಿರ್ದೇಶಕ ಪ್ರದೀಪ್ ಪಾಲ್ಗೊಂಡಿದ್ದರು.

LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






