| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ : ಶುಂಠಿ (ginger) ಬೆಲೆ ಕುಸಿತದ ಹಿನ್ನೆಲೆ ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ರೈತರಿಗೆ ನೆರವಾಗುತ್ತಿದೆ. ಪ್ರತಿ ಕ್ವಿಂಟಲ್ಗೆ 2,445 ರೂ.ನಂತೆ ರೈತರಿಂದ ಹಸಿಶುಂಠಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್ಸಿಟಿ ರೈಲು, ಆಗಿದ್ದೇನು?
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಸಿ ಶುಂಠಿ (ginger) ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತು ಚರ್ಚಿಸಲು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಸೊರಬ, ಸಾಗರ, ಶಿಕಾರಿಪುರ, ಹೊಸನಗರ, ತೀರ್ಥಹಳ್ಳಿಯಲ್ಲಿ ಶುಂಠಿ ಬೆಳೆಯಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ರೈತರಿಗೆ ಅನುಕೂಲವಾಗುವ ಸ್ಥಳದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿದೆ ಮೀಟಿಂಗ್ನ ಹೈಲೈಟ್ ಪಾಯಿಂಟ್
» ಯೋಜನೆಯ ಮಾರ್ಗಸೂಚಿಯನ್ವಯ ಮೈಸೂರು, ಹಾಸನ, ಹಾವೇರಿ, ಶಿವಮೊಗ್ಗ, ಬೀದರ್, ಚಿಕ್ಕಮಗಳೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ರೈತರಿಂದ ಗರಿಷ್ಟ 59,948 ಟನ್ ಎಫ್ಎಕ್ಯು ಗುಣಮಟ್ಟದ ಹಸಿಶುಂಠಿ (ginger) ಖರೀದಿಸಲಾಗುವುದು.

» ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವನ್ನು ಖರೀದಿ ಸಂಸ್ಥೆಯನ್ನಾಗಿ ನೇಮಕ ಮಾಡಲಾಗಿದೆ.
» ರೈತರ ನೋಂದಣಿ ಕಾರ್ಯದ ಜೊತೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಎಕರೆಗೆ 30 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಟ 60 ಕ್ವಿಂಟಲ್ ಪ್ರಮಾಣದ ಎಫ್ಎಕ್ಯು ಗುಣಮಟ್ಟದ ಹಸಿಶುಂಠಿ ಖರೀದಿಸಲಾಗುವುದು. ಈ ಕೂಡಲೇ ರೈತರು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು.
» ಕೇಂದ್ರ ಸರ್ಕಾರ ಕ್ವಿಂಟಲ್ ಶುಂಠಿಗೆ ಗರಿಷ್ಟ 611.25 ರೂ. ನಿರ್ವಹಣಾ ವೆಚ್ಚ ನಿಗದಿಪಡಿಸಿದೆ. ಈ ಮಿತಿಗೊಳಪಟ್ಟು ನಿರ್ವಹಣಾ ವೆಚ್ಚದಲ್ಲಿಯೇ ಕೈಗೊಳ್ಳಬೇಕು.
» ಹಸಿಶುಂಠಿ ಶೇಖರಣೆ ಮಾಡಲು ಆಯಾ ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಲಭ್ಯವಿರುವ ಶೀತಲಗೃಹವನ್ನು ಪರಿಶೀಲಿಸಿ ಖರೀದಿ ಪೂರ್ವದಲ್ಲಿಯೇ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು.
» ಎಫ್ಎಕ್ಯು ಗುಣಮಟ್ಟ ಖಾತ್ರಿಪಡಿಸಲು ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಾಂಬಾರ ಪದಾರ್ಥಗಳ ಮಂಡಳಿಯ ಅಧಿಕಾರಿಗಳನ್ನು ನಿಯೋಜಿಸಿ ಎಫ್ಎಕ್ಯು ಗುಣಮಟ್ಟ ದೃಢೀಕರಿಸಿಕೊಳ್ಳಬೇಕು.
» ಹಸಿ ಶುಂಠಿ ಖರೀದಿ ಪೂರ್ವದಲ್ಲಿ, ಪಹಣಿಯಲ್ಲಿ 2024-25ನೇ ಸಾಲಿಗೆ ಬೆಳೆ ಸಮೀಕ್ಷೆ ದೃಢೀಕರಿಸಿ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಕೈಗೊಳ್ಳಬೇಕು. ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಉತ್ಪನ್ನದ ಮೊತ್ತವು ಡಿಬಿಟಿ/ಎನ್ಇಎಫ್ಟಿ/ಆರ್ಟಿಜಿಎಸ್ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು.
ಎಪಿಎಂಸಿ ಹೆಚ್ಚುವರಿ ನಿರ್ದೇಶಕ ಎಚ್.ವೈ.ಸತೀಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ, ಕೃಷಿ ಇಲಾಖೆ, ಸಹಕಾರ ಇಲಾಖೆ, ಸಹಕಾರ ಮಾರಾಟ ಮಹಾಮಂಡಳದ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()