ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳಿದ್ದ ಮಹಿಳೆ ರಾತ್ರಿ ಬ್ಯಾಗ್‌ ತೆಗೆದಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಸರ (Gold Chain) ಕಳ್ಳತನವಾಗಿದೆ ಎಂದು ಚಿತ್ರದುರ್ಗದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದಾರೆ.

ಚಿತ್ರದುರ್ಗದ ಪಾರ್ವತಮ್ಮ ಮತ್ತು ಅವರ ಸೊಸೆ ಜೂನ್‌ 7ರಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಲ್ಲಿನ ಕಾಲೇಜಿನಲ್ಲಿ ಓದುತ್ತಿರುವ ತಮ್ಮ ಪುತ್ರಿಯನ್ನು ಮಾತನಾಡಿಸಿ ಊರಿಗೆ ಹಿಂತಿರುಗುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತಲು ಬಂದಾಗ ಪಾರ್ವತಮ್ಮ ಮತ್ತು ಅವರ ಸೊಸೆ ಶೌಚಾಲಯಕ್ಕೆ ತೆರಳಿದ್ದರು. ತಮ್ಮ ವ್ಯಾನಿಟಿ ಬ್ಯಾಗ್‌ ಅನ್ನು ಹೊರಗೆ ಇಟ್ಟು ಹೋಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ಪಾರ್ವತಮ್ಮ ಮತ್ತು ಅವರ ಸೊಸೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಚಿತ್ರದುರ್ಗದ ತಮ್ಮೂರಿಗೆ ಹಿಂತಿರುಗಿದ್ದರು. ರಾತ್ರಿ ಮನೆಯಲ್ಲಿ ವ್ಯಾನಿಟಿ ಬ್ಯಾಗ್‌ ತೆಗೆದಾಗ ಅದೊರಳಗಿದ್ದ ಪರ್ಸ್‌ ಇರಲಿಲ್ಲ. ಆ ಪರ್ಸ್‌ನಲ್ಲಿ 20 ಗ್ರಾಂ ತೂಕದ ಚಿನ್ನದ ಚೈನ್‌ ಇತ್ತು. ಇದರ ಮೌಲ್ಯ 70 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ತಾವು ಶೌಚಾಲಯಕ್ಕೆ ತೆರಳಿದ್ದ ಸಂದರ್ಭ ಚೈನ್‌ ಇರುವ ಪರ್ಸ್‌ ಕಳ್ಳತನ ಆಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದನ್ನೂ ಓದಿ » ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment