ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಸರ (Gold Chain) ಕಳ್ಳತನವಾಗಿದೆ ಎಂದು ಚಿತ್ರದುರ್ಗದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದಾರೆ.
ಚಿತ್ರದುರ್ಗದ ಪಾರ್ವತಮ್ಮ ಮತ್ತು ಅವರ ಸೊಸೆ ಜೂನ್ 7ರಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಲ್ಲಿನ ಕಾಲೇಜಿನಲ್ಲಿ ಓದುತ್ತಿರುವ ತಮ್ಮ ಪುತ್ರಿಯನ್ನು ಮಾತನಾಡಿಸಿ ಊರಿಗೆ ಹಿಂತಿರುಗುತ್ತಿದ್ದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಬಂದಾಗ ಪಾರ್ವತಮ್ಮ ಮತ್ತು ಅವರ ಸೊಸೆ ಶೌಚಾಲಯಕ್ಕೆ ತೆರಳಿದ್ದರು. ತಮ್ಮ ವ್ಯಾನಿಟಿ ಬ್ಯಾಗ್ ಅನ್ನು ಹೊರಗೆ ಇಟ್ಟು ಹೋಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪಾರ್ವತಮ್ಮ ಮತ್ತು ಅವರ ಸೊಸೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಚಿತ್ರದುರ್ಗದ ತಮ್ಮೂರಿಗೆ ಹಿಂತಿರುಗಿದ್ದರು. ರಾತ್ರಿ ಮನೆಯಲ್ಲಿ ವ್ಯಾನಿಟಿ ಬ್ಯಾಗ್ ತೆಗೆದಾಗ ಅದೊರಳಗಿದ್ದ ಪರ್ಸ್ ಇರಲಿಲ್ಲ. ಆ ಪರ್ಸ್ನಲ್ಲಿ 20 ಗ್ರಾಂ ತೂಕದ ಚಿನ್ನದ ಚೈನ್ ಇತ್ತು. ಇದರ ಮೌಲ್ಯ 70 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ತಾವು ಶೌಚಾಲಯಕ್ಕೆ ತೆರಳಿದ್ದ ಸಂದರ್ಭ ಚೈನ್ ಇರುವ ಪರ್ಸ್ ಕಳ್ಳತನ ಆಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200