ನಿಧಿ ಆಸೆ, ಬೆಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಲಕ್ಷ ಲಕ್ಷ ರೂ. ವಂಚನೆ, ಹೇಗಾಯ್ತು ಮೋಸ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 AUGUST 2023

SHIMOGA : ಮನೆ ಬುನಾದಿ ಅಗೆಯುವಾಗ ಚಿನ್ನದ ನಾಣ್ಯಗಳ (Gold Coins) ನಿಧಿ ಪತ್ತೆಯಾಗಿದೆ. ಅದನ್ನು ಮಾರಾಟ ಮಾಡುತ್ತಿರುವುದಾಗಿ ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಐದು ಲಕ್ಷ ರೂ. ವಂಚನೆ ಮಾಡಲಾಗಿದೆ.

ಬೆಂಗಳೂರಿನ ಮಂಜುನಾಥ ಸ್ವಾಮಿ ಎಂಬುವವರಿಗೆ ಶಿವಪ್ಪ ಗೊಲ್ಲರ್‌ ಎಂಬಾತ ವಂಚನೆ ಮಾಡಿದ್ದಾನೆ.

ಅಜ್ಜನಿಗೆ ಸಿಕ್ತು ರಾಶಿ ರಾಶಿ ಚಿನ್ನದ ನಾಣ್ಯ

ಹುಬ್ಬಳ್ಳಿಯ ಬಸಾಪುರ ಗ್ರಾಮದಲ್ಲಿ ಮನೆಯ ಬುನಾದಿ ಅಗೆಯುವಾಗ ಅಜ್ಜನಿಗೆ ಚಿನ್ನದ ನಾಣ್ಯಗಳ (Gold Coins) ನಿಧಿ ಸಿಕ್ಕಿದೆ ಎಂದು ಶಿವಪ್ಪ ಗೊಲ್ಲರ್‌ ಎಂಬಾತ ಮಂಜುನಾಥ ಸ್ವಾಮಿಗೆ ನಂಬಿಸಿದ್ದಾನೆ. ಚಿನ್ನದ ನಾಣ್ಯಗಳನ್ನ ಮಾರಾಟ ಮಾಡುತ್ತಿರುವುದಾಗಿ ತಿಳಿಸಿ ಶಿವಮೊಗ್ಗಕ್ಕೆ ಬರುವಂತೆ ಸೂಚಿಸಿದ್ದಾನೆ. ಮಂಜುನಾಥ ಸ್ವಾಮಿ ಅವರು ಮೊದಲ ಬಾರಿ ಶಿವಮೊಗ್ಗಕ್ಕೆ ಬಂದಾಗ ಶಿವಪ್ಪ ಗೊಲ್ಲರ್‌ ಒಂದು ಚಿನ್ನದ ನಾಣ್ಯವನ್ನು ಕೊಟ್ಟಿದ್ದ. ಅದನ್ನು ಪರೀಕ್ಷಿಸಿದಾಗ ಅಸಲಿ ಚಿನ್ನವಾಗಿತ್ತು.

ಐದು ಲಕ್ಷ ರೂ. ಪಡೆದು ಮೊಬೈಲ್‌ ಸ್ವಿಚ್‌ ಆಫ್‌

ಇನ್ನಷ್ಟು ಚಿನ್ನದ ನಾಣ್ಯಗಳು ಬೇಕು ಎಂದು ಕೇಳಿದಾಗ, ಹಣ ಕೊಟ್ಟಷ್ಟು ನಾಣ್ಯಗಳನ್ನು ಕೊಡುವುದಾಗಿ ಶಿವಪ್ಪ ತಿಳಿಸಿದ್ದ. ಐದು ಲಕ್ಷ ರೂ. ಹಣದೊಂದಿಗೆ ಎರಡನೇ ಬಾರಿ ಶಿವಮೊಗ್ಗಕ್ಕೆ ಬಂದಿದ್ದ ಮಂಜುನಾಥ ಸ್ವಾಮಿ ಅವರನ್ನು ಸವಳಂಗ ರಸ್ತೆಯ ಸರ್ಜಿ ಕನ್ವೆಷನ್‌ ಹಾಲ್‌ ಸಮೀಪ ಕರೆಯಿಸಿಕೊಂಡಿದ್ದ. ಹಣ ಪಡೆದು 474 ಗ್ರಾಂ ನಾಣ್ಯಗಳನ್ನು ನೀಡಿದ್ದ. ಪರಿಶೀಲಿಸಿದಾಗ ಆ ನಾಣ್ಯಗಳು ನಕಲಿ ಎಂದು ಗೊತ್ತಾಗಿದೆ. ಶಿವಪ್ಪ ಗೊಲ್ಲರ್‌ಗೆ ಕರೆ ಮಾಡಿದಾಗ ಆತನ ಮೊಬೈಲ್‌ ಸ್ವಿಚ್‌ ಆಫ್‌ ಎಂದು ಬರುತ್ತಿತ್ತು.

ಇದನ್ನೂ ಓದಿ – ಅಡ್ಡ ನಿಲ್ಲಿಸಿದ್ದ ಬೈಕ್‌ ತಗಿ ಅಂದಿದ್ದಕ್ಕೆ ಕೀಯಿಂದಲೇ ಮೂವರಿಗೆ ಹೊಡೆದು ರಕ್ತ ಬರಿಸಿದ ಯುವಕ – 3 ಫಟಾಫಟ್‌ ನ್ಯೂಸ್‌

ವಂಚನೆಗೊಳಗಾಗಿರುವುದು ಅರಿವಾಗುತ್ತಿದ್ದಂತೆ ಮಂಜುನಾಥ ಸ್ವಾಮಿ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಟ್ಯೂಷನ್‌ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಅಟ್ಯಾಕ್‌, ಕಾರಣವೇನು?

ಇಂತಹ ಪ್ರಕರಣ ಇದೇ ಮೊದಲಲ್ಲ

ನಿಧಿ ನೆಪದಲ್ಲಿ ವಂಚನೆ ಮಾಡುತ್ತಿರುವುದು ಇದೆ ಮೊದಲಲ್ಲ. ರಾಜ್ಯ ವಿವಿಧೆಡೆ ಇಂತಹ ಪ್ರಕರಣ ದಾಖಲಾಗಿದೆ. ವಂಚಕರು ಕಾರ್ಯಕ್ರಮಗಳು, ಬಸ್ಸು, ಟ್ರೈನಿನಲ್ಲಿ ಸಂಚರಿಸುವಾಗ ಅಥವಾ ಸಾರ್ವಜನಿಕ ಸ್ಥಳದಲ್ಲಿ ಯಾರನ್ನಾದರು ಪರಿಚಯ ಮಾಡಿಕೊಂಡು, ಮೊಬೈಲ್‌ ನಂಬರ್‌ ಪಡೆಯುತ್ತಾರೆ. ಅವರೊಂದಿಗೆ ಭರವಸೆ ಬರುವಂತೆ ಸ್ವಲ್ಪ ಸಮಯ ಮಾತನಾಡುತ್ತಾರೆ. ಕೊನೆಗೆ ನಿಧಿ ಪತ್ತೆಯಾಗಿದೆ ಎಂದು ತಿಳಿಸಿ ಮೊದಲಿಗೆ ಅಸಲಿ ಚಿನ್ನದ ನಾಣ್ಯ ಕೊಟ್ಟು ಆಸೆ ಹುಟ್ಟಿಸುತ್ತಾರೆ. ಆ ನಂತರ ವಂಚಿಸಿ ಕಣ್ಮರೆಯಾಗುತ್ತಾರೆ. ಅಪರಿಚಿತರ ಜೊತೆಗೆ ವ್ಯವಹಾರ ನಡೆಸುವಾಗ ಸ್ವಲ್ಪ ಎಚ್ಚರ ವಹಿಸಿದರೆ ವಂಚನೆಯಿಂದ ತಪ್ಪಿಸಿಕೊಳ್ಳಬಹುದು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 24, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment