SHIVAMOGGA LIVE NEWS | 20 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ನೂತನವಾಗಿ ಆಯ್ಕೆಯಾಗಿರುವ ಜಿಲ್ಲೆಯ ಸಂಸದ, ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಸರ್ಕಾರಿ ನೌಕರರ (Government Employees) ಸಂಘದ ಜಿಲ್ಲಾ ಶಾಖೆಯಿಂದ ಜೂ.23ರಂದು ಅಭಿನಂದನಾ ಕಾರ್ಯಕ್ರಮ, ನವೀಕೃತ ಸರ್ಕಾರಿ ನೌಕರರ ಕಟ್ಟಡದ ಉದ್ಘಾಟನೆ, ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ನವೀಕೃತ ಭವನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಪ್ರತಿಭಾ ಪುರಸ್ಕಾರವನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ನಡೆಸಿಕೊಡಲಿದ್ದಾರೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಬಲ್ಕಿಷ್ ಬಾನು, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಅಲೆಮಾರಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಅವರನ್ನು ಅಭಿನಂದಿಸಲಾಗುವುದು ಎಂದರು.
ಜಿಲ್ಲಾಕಾರಿ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಕಾರಿ ಜಿ.ಕೆ.ಮಿಥುನ್ಕುಮಾರ್, ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ವಿದ್ಯಾರ್ಥಿಗಳಿಗೆ ಪ್ರೇರಣಾ ನುಡಿ ಆಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಹಾಜರಿರಲಿದ್ದಾರೆ ಎಂದರು.
ನೌಕರರ ಸಂಘದ ಪ್ರಮುಖರಾದ ಮೋಹನ್ ಕುಮಾರ್, ಕೃಷ್ಣಮೂರ್ತಿ, ಡಾ.ಹಿರೇಮಠ, ಪಾಪಣ್ಣ ಇತರರಿದ್ದರು.
ಇದನ್ನೂ ಓದಿ – 7ನೇ ವೇತನ ಆಯೋಗ, ವರದಿ ಜಾರಿ ಯಾವಾಗ?, ಷಡಾಕ್ಷರಿ ಹೇಳಿದ್ದೇನು?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






