ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 DECEMBER 2022
ಶಿವಮೊಗ್ಗ : ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ (sports meet) ಮತ್ತು ವಿವಿಧ ಸ್ಪರ್ಧೆಗಳನ್ನು ನಗರದ ನೆಹರೂ ಸ್ಟೇಡಿಯಂನಲ್ಲಿ ನಡೆಸಲಾಯಿತು. ವಿವಿಧ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರ್ಕಾರಿ ನೌಕರರ ಭಾಗವಹಿಸಿದರು.

ನೆಹರೂ ಸ್ಟೇಡಿಯಂನಲ್ಲಿ ಸರ್ಕಾರಿ ನೌಕರರಿಗಾಗಿ ವಾಲಿಬಾಲ್, ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ ಬಾಲ್ ಸೇರಿದಂತೆ ವಿವಿಧ ಅಥ್ಲೆಟಿಕ್ ಸ್ಪರ್ಧೆಗಳನ್ನು (sports meet) ಆಯೋಜಿಸಲಾಗಿತ್ತು. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ನಡೆಸಲಾಯಿತು.

ಇನ್ನು, ಸಾಂಸ್ಕೃತಿಕ ಸ್ಪರ್ಧೆಗಳನ್ನು ಕೂಡ ಆಯೋಜಿಸಲಾಗಿತ್ತು. ನೆಹರೂ ಕ್ರೀಡಾಂಗಣದಲ್ಲಿಯೇ ನಿರ್ಮಿಸಲಾಗಿದ್ದ ವೇದಿಕೆಗಳಲ್ಲಿ ಜಾನಪದ ಹಾಡು, ಕೆಲ ಪ್ರದರ್ಶನ ಸ್ಪರ್ಧೆಗಳು ನಡೆದವು. ಜಿಲ್ಲೆಯ ವಿವಿಧೆಡೆಯ ಸರ್ಕಾರಿ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನೇತೃತ್ವದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಇದನ್ನೂ ಓದಿ – 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ?

ಇದಕ್ಕೂ ಮೊದಲು ಜಿಲ್ಲಾ ಮಟ್ಟದ ಕ್ರೀಡಾಕೂಟಗಳಿಗೆ ಚಾಲನೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಹಿರಿಯರು ತಮ್ಮ ಕುಟುಂಬದ ಕಿರಿಯರೊಂದಿಗೆ ಸೇರಿ ದೈನಂದಿನ ಕೆಲ ಸಮಯವನ್ನಾದರೂ ಕ್ರೀಡೆ ಹಾಗೂ ಮನೋರಂಜನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ಶುಭಾರಂಭಗೊಳ್ಳುವುದು ಶಿವಮೊಗ್ಗದಿಂದಲೇ. ಇಲ್ಲಿನ ಅಧಿಕಾರಿ-ಸಿಬ್ಬಂಧಿಗಳ ಪರಿಶ್ರಮದಿಂದ ಬಹುತೇಕ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ಬಂದಿವೆ ಎಂದರು.

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ದಿನನಿತ್ಯ ಒತ್ತಡದಲ್ಲಿ ದಿನಕಳೆಯುವ ನೌಕರರು ಕೆಲ ಸಮಯವಾದರೂ ಎಲ್ಲಾ ಒತ್ತಡಗಳಿಂದ ಹೊರಬಂದು ನೆಮ್ಮದಿಯ ಕ್ಷಣಗಳನ್ನು ಕಳೆಯಲು, ಇಲಾಖೆಗಳ, ಅಧಿಕಾರಿ-ಸಿಬ್ಬಂಧಿಗಳೊಂದಿಗೆ ಸ್ನೇಹದ ವಾತಾವರಣ ನಿರ್ಮಿಸುವಲ್ಲಿ ಈ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಭೋಜೆಗೌಡ, ಡಿ.ಎಸ್.ಅರುಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಪ್ರಕಾಶ್, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಷಡಾಕ್ಷರಿ, ಆರ್.ಮೋಹನ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.






[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















