Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ನಕ್ಸಲರ ಶರಣಾಗತಿಗೆ ಸರ್ಕಾರದ ಸಮಿತಿ, ಶಿವಮೊಗ್ಗದಲ್ಲಿ ಮೊದಲ ಸುದ್ದಿಗೋಷ್ಠಿ, ಏನೆಲ್ಲ ಹೇಳಿದರು?

ನಕ್ಸಲರ ಶರಣಾಗತಿಗೆ ಸರ್ಕಾರದ ಸಮಿತಿ, ಶಿವಮೊಗ್ಗದಲ್ಲಿ ಮೊದಲ ಸುದ್ದಿಗೋಷ್ಠಿ, ಏನೆಲ್ಲ ಹೇಳಿದರು?

16/05/2024 8:24 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 16 MAY 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ರಾಜ್ಯದಲ್ಲಿ ನಕ್ಸಲ್‌ ಚಟುವಟಿಕೆ ಮತ್ತೆ ಸುದ್ದಿಯಾಗುತ್ತಿದೆ. ಈ ಮಧ್ಯೆ ನಕ್ಸಲರ ಶರಣಾಗತಿ (Surrender) ಮತ್ತು ಪುನರ್‌ವಸತಿಗೆ ಸರ್ಕಾರ ರಾಜ್ಯಮಟ್ಟದ ಸಮಿತಿಯನ್ನು ಪುನರ್‌ ನೇಮಕ ಮಾಡಿದೆ. ಸಾಹಿತಿ, ಪ್ರಗತಿಪರ ಚಿಂತಕ ಬಂಜಗೆರೆ ಜಯಪ್ರಕಾಶ್‌, ಪತ್ರಕರ್ತ ಪಾರ್ವತೀಶ, ವಕೀಲ ಕೆ.ಪಿ.ಶ್ರೀಪಾಲ್‌ ಅವರನ್ನು ಸದಸ್ಯರಾಗಿ ನೇಮಿಸಿದೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸದಸ್ಯರು, ನಕ್ಸಲ್‌ ಹೋರಾಟದಲ್ಲಿ ಸಕ್ರಿಯರಾಗಿರುವವರು ಮುಖ್ಯವಾಹಿನಿಗೆ ಬರಲು ಆಸಕ್ತರಿದ್ದರೆ ಸಮಿತಿ ನೆರವು ನೀಡಲಿದೆ ಎಂದು ತಿಳಿಸಿದರು.

ಯಾರೆಲ್ಲ ಏನೇನು ಹೇಳಿದರು?

  • ಬಂಜಗೆರೆ ಜಯಪ್ರಕಾಶ್‌, ಪ್ರಗತಿಪರ ಚಿಂತಕ

QUOTE LOGO NEW jpgನಕ್ಸಲರ ಮುಂದಿನ ಜೀವನ, ಪುನರ್‌ವಸತಿಗೆ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ನಕ್ಸಲ್‌ ಚಟುವಟಿಯಿಂದ ಹೊರಬಂದು ಮುಖ್ಯವಾಹಿನಿಯಲ್ಲಿ ಇದ್ದು ಹೋರಾಟ ಮುಂದುವರೆಸಲು ಅವಕಾಶವಿದೆ. ಮುಖ್ಯವಾಹಿನಿಗೆ ಬಂದ ಮೇಲೆ ಕಾನೂನು ಪ್ರಕ್ರಿಯೆಗಳು ಮುಂದುವರೆಯಲಿವೆ. ಈಗಾಗಲೇ ಮುಖ್ಯವಾಹಿನಿಗೆ ಬಂದಿರುವವರು ಉತ್ತಮ ಜೀವನ ನಡೆಸುತ್ತಿದ್ದಾರೆ. ಮುಖ್ಯವಾಹಿನಿಗೆ ಬರುವವರು ತಮ್ಮನ್ನು ಸಂಪರ್ಕಿಸಬಹುದು.

  • ಪಾರ್ವತೀಶ, ಪತ್ರಕರ್ತ

QUOTE LOGO NEW jpgಈ ಹಿಂದೆ ಎರಡು ಬಾರಿ ಶರಣಾಗತಿ ಮತ್ತು ಪುನರ್‌ವಸತಿಗೆ ರಾಜ್ಯಮಟ್ಟದ ಸಮಿತಿಯನ್ನು ರಚಿಸಲಾಗಿತ್ತು. ಆಗ 14 ಮಂದಿ ಸಶಸ್ತ್ರ ಹೋರಾಟ ತೊರೆದು ಮುಖ್ಯವಾಹಿನಿಗೆ ಬಂದಿದ್ದಾರೆ. ಈಗ ಸರ್ಕಾರ ಮುಕ್ತ ಅವಕಾಶ ನೀಡಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ನಕ್ಸಲ್ ಹೋರಾಟ ಇಳಿಮುಖ ಆಗಿತ್ತು. ಕಳೆದ ತಿಂಗಳು ಮಲೆನಾಡಿನಲ್ಲಿ ಮತ್ತೆ ನಕ್ಸಲ್ ಇರುವಿಕೆ ಸುದ್ದಿಯಾಗಿದೆ. ರಾಜ್ಯದಲ್ಲಿ ಏಳರಿಂದ ಎಂಟು ನಕ್ಸಲರು ಇದ್ದಾರೆ ಎಂಬ ಮಾಹಿತಿ ಇದೆ. ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದೇವೆ. ಸಕಾರಾತ್ಮಕ ಪ್ರತಿಕ್ರಿಯೆ ಬಂದರೆ ಮುಂದಿನ ನಿರ್ಧಾರ‌ ಕೈಗೊಳ್ಳುತ್ತೇವೆ. ರಾಜ್ಯದ ನಕ್ಸಲರು ಮತ್ತು ಹೊರ ರಾಜ್ಯದ ನಕ್ಸಲರಿಗೆ ಪ್ರತ್ಯೇಕ ಪ್ಯಾಕೇಜ್ ಇರಲಿದೆ.

  • ಕೆ.ಪಿ.ಶ್ರೀಪಾಲ್‌, ವಕೀಲ

QUOTE LOGO NEW jpgನಕ್ಸಲರು ಶರಣಾದರೆ ನ್ಯಾಯಾಲಯದ ಕಲಾಪಗಳು ಅತ್ಯಂತ ವಿಳಂಬವಾಗಲಿದೆ ಎಂಬ ಅಭಿಪ್ರಾಯವಿದೆ. ಆದರೆ ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ 14 ಮಂದಿ ಪೈಕಿ ಮೂವರ ಪ್ರಕರಣಗಳು ಮಾತ್ರ ವಿಚಾರಣೆಯಲ್ಲಿದೆ. ನಕ್ಸಲರ ಪ್ರಕರಣಗಳ ವಿಚಾರಣೆಗಳಿಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮುಖ್ಯವಾಹಿನಿಗೆ ಬರುವವರ ಪರ ವಾದಕ್ಕೆ ವಕೀಲರು ಕೂಡ ಸಿದ್ದರಿದ್ದಾರೆ.

ಇದನ್ನೂ ಓದಿ – ಲಾರಿಗೆ ಅಡಿಕೆ ತುಂಬುವಾಗ ಇದ್ದ ತೂಕ ಒಂದು, ಇಳಿಸುವಾಗ ಇದ್ದ ತೂಕ ಮತ್ತೊಂದು, ಮಧ್ಯದಲ್ಲಿ ಆಗಿದ್ದೇನು?

ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ?

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಒಳಾಡಳಿತ ಇಲಾಖೆಯ ಅಪರ ಕಾರ್ಯದರ್ಶಿ, ಡಿಜಿ ಮತ್ತು ಐಜಿಪಿ, ಗುಪ್ತವಾರ್ತೆ ನಿರ್ದೇಶಕರು, ಆಂತರಿಕ ಭದ್ರತಾ ವಿಭಾಗದ ಮುಖ್ಯಸ್ಥರು, ರಾಜ್ಯ ಗುಪ್ತವಾರ್ತೆ ವಿಭಾಗದ ಕೌಂಟರ್‌ ಇಂಟೆಲಿಜೆನ್ಸ್‌ ಉಪ ನಿರ್ದೇಶಕರು, ಪ್ರಗತಿಪರ ಚಿಂತಕ ಬಂಜಗೆರೆ ಜಯಪ್ರಕಾಶ್‌, ಪತ್ರಕರ್ತ ಪಾರ್ವತೀಶ, ವಕೀಲ ಕೆ.ಪಿ.ಶ್ರೀಪಾಲ್‌, ನಕ್ಸಲ್‌ ನಿಗ್ರಹ ದಳದ ಉಪ ಪೊಲೀಸ್‌ ಮಹಾ ನಿರೀಕ್ಷಕರು ಸಮಿತಿ ಸದಸ್ಯರಾಗಿರುತ್ತಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 140823-Jayanagara-Police-Station ಲಾರಿಗೆ ಅಡಿಕೆ ತುಂಬುವಾಗ ಇದ್ದ ತೂಕ ಒಂದು, ಇಳಿಸುವಾಗ ಇದ್ದ ತೂಕ ಮತ್ತೊಂದು, ಮಧ್ಯದಲ್ಲಿ ಆಗಿದ್ದೇನು?
Next Article WEATHER-REPORT-GENERAL-IMAGE.webp ಶಿವಮೊಗ್ಗ ಈಗ ಕೂಲ್‌ ಕೂಲ್‌, ಎಷ್ಟಿದೆ ತಾಪಮಾನ? ಇವತ್ತು ಎಷ್ಟೊತ್ತಿಗೆ ಮಳೆಯಾಗುತ್ತೆ?

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?