ನಾಲ್ಕು ತಿಂಗಳಾಯ್ತು ಸದಸ್ಯರಿಲ್ಲ, ಕೂಡಲೆ ಚುನಾವಣೆ ನಡೆಸುವಂತೆ ಒತ್ತಾಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
SHIVAMOGGA LIVE NEWS | 20 FEBRUARY 2024
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

SHIMOGA : ಮಹಾನಗರ ಪಾಲಿಕೆ ಅವಧಿ ಮುಕ್ತಾಯವಾಗಿ ನಾಲ್ಕು ತಿಂಗಳು ಕಳೆದಿದೆ. ಸರ್ಕಾರ ಕೂಡಲೆ ಪಾಲಿಕೆ ಚುನಾವಣೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸದಸ್ಯರು ಇಲ್ಲದಿರುವುದರಿಂದ ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ. ಕಸ ವಿಲೇವಾರಿ ಪರಿಪೂರ್ಣವಾಗಿ ಆಗದೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅಭಿವೃದ್ಧಿ ಕಾರ್ಯಗಳು ನಡೆಯತ್ತಿಲ್ಲ ಎಂದು ಆರೋಪಿಸಿದರು.

ಮಲವಗೊಪ್ಪ, ಗಾಡಿಕೊಪ್ಪ, ಬೊಮ್ಮನಕಟ್ಟೆ, ನವುಲೆ, ಮಲ್ಲಿಗೆನಹಳ್ಳಿ, ವಡ್ಡಿಕೊಪ್ಪ ಸೇರಿದ ಹಲವು ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡು 20 ವರ್ಷವಾದರು ಅಭಿವೃದ್ದಿಯಾಗಿಲ್ಲ. ಈಗ ಸೋಗಾನೆ, ಗೋವಿಂದಾಪುರ, ಅನುಪಿನಕಟ್ಟೆ ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಾಲಿಕೆ ಆಯುಕ್ತರಿಗೆ ಪತ್ರೆ ಬರೆದಿದ್ದಾರೆ ಎಂದರು.

ಇದನ್ನೂ ಓದಿ – ಮೈಸೂರು ಪೇಪರ್‌ ಮಿಲ್ಸ್‌ ಪುನಾರಂಭ ಕುರಿತು ಪರಿಷತ್‌ನಲ್ಲಿ ರುದ್ರೇಗೌಡ ಪ್ರಶ್ನೆ, ಸರ್ಕಾರದ ಉತ್ತರವೇನು?

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!