ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಆಗಸ್ಟ್ 2020
ಗೌರಿ ಮತ್ತು ಗಣೇಶ ಚತುರ್ಥಿ ಹಿನ್ನೆಲೆ ಶಿವಮೊಗ್ಗದಲ್ಲಿ ಹೂವು, ಹಣ್ಣು, ಪೂಜಾ ಸಾಮಾಗ್ರಿ ಖರೀದಿ ಜೋರಿದೆ. ಕರೋನ ಲಾಕ್ಡೌನ್ ಬಳಿಕ ಹಿಂದೂಗಳ ಪಾಲಿಗೆ ಇದು ದೊಡ್ಡ ಹಬ್ಬವಾಗಿದೆ. ಹಾಗಾಗಿ ಖರೀದಿ ಭರಾಟೆ ಜೋರಿದೆ.
ಗಾಂಧಿ ಬಜಾರ್ನಲ್ಲಿ ಜನವೋ ಜನ
ಗಾಂಧಿ ಬಜಾರ್ನ ತರಕಾರಿ ಮಾರುಕಟ್ಟೆಯಲ್ಲಿ ಜನ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಬಟ್ಟೆ ಮತ್ತು ಅಲಂಕಾರಿಕ ವಸ್ತುಗಳ ಮಾರಾಟ ಮಳಿಗೆಯಲ್ಲೂ ಖರೀದಿ ಜೋರಿದೆ. ಗೌರಿ ಪೂಜೆಗೆ ಬೇಕಾದ ಪೂಜಾ ಸಾಮಾಗ್ರಿ ಬಿರುಸಾಗಿದೆ.
ಹೂವು, ಹಣ್ಣು, ಬಾಳೆಕಂಬ
ಶಿವಪ್ಪನಾಯಕ ಹೂವು ಮಾರುಕಟ್ಟೆಯಲ್ಲಿ ಹೂವು, ಹಣ್ಣು, ಬಳೆಕಂಬ ಸೇರಿದಂತೆ ಪೂಜಾ ಸಾಮಾಗ್ರಿ ಖರೀದಿ ನಡೆಯುತ್ತಿದೆ. ಮಹಾನಗರ ಪಾಲಿಕೆ ಪಕ್ಕದ ರಸ್ತೆಯಲ್ಲಿ ವ್ಯಾಪಾರಿಗಳು ತಾತ್ಕಾಲಿಕ ಮಳಿಗೆಗಳನ್ನು ಸ್ಥಾಪಿಸಿದ್ದಾರೆ. ವ್ಯಾಪಾರ ಬಿರುಸಾಗಿ ನಡೆಯುತ್ತಿದೆ.
ನಗರದ ವಿವಿಧೆಡೆ ಹಬ್ಬದ ಸಡಗರ
ಶಿವಮೊಗ್ಗ ನಗರದ ವಿವಿಧೆಡೆ ಹಬ್ಬದ ಸಡಗರ ಜೋರಾಗಿದೆ. ವಿನೋಬನಗರ ಎಪಿಎಂಸಿ ಮಾರುಕಟ್ಟೆ, ಲಕ್ಷ್ಮೀ ಟಾಕೀಸ್ ಬಳಿ, ಗೋಪಾಳ ಸೇರಿದಂತೆ ವಿವಿಧೆಡೆ ಹೂವು, ಹಣ್ಣು, ಪೂಜಾ ಸಾಮಗ್ರಿ ಖರೀದಿ ಬಿರುಸಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]