ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021
ಕನಿಷ್ಠ ಕೂಲಿ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯಿತಿ ಸಿ.ಇ.ಒ. ಅವರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗಾರ, ಜವಾನ, ನೀರುಘಂಟಿ, ಜಾಡುಮಾಲಿ ಹಾಗೂ ಇನ್ನಿತರ ನೌಕರರು ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಇವರಿಗೆ ಕನಿಷ್ಠ ವೇತನ ಬಡ್ತಿ ಇಲ್ಲವಾಗಿದೆ ಈ ಬಗ್ಗೆ ಹಲವು ಬಾರಿ ಪ್ರತಿಭಟನೆ, ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಕಾರರು ತಿಳಿಸಿದರು.
ಪ್ರತಿಭಟನಾಕಾರರ ಬೇಡಿಕೆ ಏನು?
21 ಸಾವಿರ ಕನಿಷ್ಠ ಕೂಲಿ ನೀಡಬೇಕು 15ನೇ ಹಣಕಾಸು ಯೋಜನೆಯಡಿಯಲ್ಲಿ ವೇತನಕ್ಕಾಗಿ ಹಣ ಕಾಯ್ದಿರಿಸಿಕೊಳ್ಳಬೇಕು.
ಜಿಲ್ಲಾ ಪಂಚಾಯಿತಿಗಳಲ್ಲಿ ಹೊಸ ನೇಮಕಾತಿ ಮಾಡಿಕೊಳ್ಳಬೇಕು. ಪದೋನ್ನತಿ ನೀಡಬೇಕು. ಸೇವಾ ಪುಸ್ತಕ ಇಡಬೇಕು. ವಿದ್ಯಾರ್ಹತೆಗೆ ಅನುಗುಣವಾಗಿ ಪಂಚಾಯಿತಿ ಸಿಬ್ಬಂದಿಗಳಲ್ಲೂ ನೇಮಕ ಮಾಡಿಕೊಳ್ಳಬೇಕು. ಎಲ್ಲಾ ನೌಕರರನ್ನು ಇ.ಎಫ್.ಎಂ.ಎಸ್.ಗೆ ಸೇರ್ಪಡೆ ಮಾಡಿಕೊಳ್ಳಬೇಕು.
ಸುರಕ್ಷತಾ ಸಾಧನ ನೀಡಬೇಕು. ಡಾಟಾ ಎಂಟ್ರಿ ಆಪರೇಟರ್ಗಳಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಬಂಗಾರಪ್ಪ, ಉಮೇಶ್, ಪ್ರಶಾಂತ್, ನಾರಾಯಣ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

- ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

- ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

- ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು
















