ಶಿವಮೊಗ್ಗದಲ್ಲಿ ಗ್ರಾಮ ಸೇವಾ ಸಂಘದಿಂದ ವಸ್ತುಪ್ರದರ್ಶನ, ಮಾರಾಟ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗ್ರಾಮಸೇವಾ ಸಂಘ ಹಾಗೂ ಕಟಿಲು ಅಶೋಕ್‌ಪೈ ಸ್ಮಾರಕ ಕಾಲೇಜು ಇವರ ಸಂಯುಕ್ತಾಶ್ರ ಯದಲ್ಲಿ ಅ.31 ರಿಂದ ನ.2ರವರೆಗೆ ನಗರದ ಮಲ್ಲಿಕಾರ್ಜುನ ಚಿತ್ರ ಮಂದಿರ ಹಿಂಭಾಗದಲ್ಲಿರುವ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ವಿನೋದಿನಿ ಕಟ್ಟಡದಲ್ಲಿ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ ಎಂದು ಚರಕ ಕೈಮಗ್ಗ ಸಹಕಾರ ಸಂಘದ ಮುಖ್ಯಸ್ಥೆ ಪ್ರತಿಭಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಭಾ, ಚರಕ ಕೈಮಗ್ಗ ಸಹಕಾರ ಸಂಘದ ಮಹಿಳೆಯರು ಇತ್ತೀಚೆಗೆ ಹೆಗ್ಗೋಡಿನಲ್ಲಿ ನಡೆಸಿದ ಚಾರಿತ್ರಿಕ ಹೋರಾಟದಿಂದ ಪ್ರೇರಿತವಾಗಿ ಗ್ರಾಮ ಸೇವಾ ಸಂಘವು ಗ್ರಾಮೋದ್ಯೋಗ ಉಳಿಸಿ ಎಂಬ ರಾಜ್ಯವ್ಯಾಪಿ ಆಂದೋಲನಕ್ಕೆ ಕರೆ ನೀಡಿದೆ. ಇದೊಂದು ರಚನಾತ್ಮಕ ಆಂದೋಲನವಾಗಿದ್ದು, ಈ ಹಿನ್ನೆಲೆ ಯಲ್ಲಿ ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಕನ್ನಡ ರಾಜ್ಯೋತ್ಸವದ ಸಂದರ್ಭ ಈ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ವಸ್ತ್ರ ವಿನ್ಯಾಸ, ಸಿದ್ಧ ಉಡುಪು, ಕರಕುಶಲ ವಸ್ತುಗಳು ಹಾಗೂ ಕೃಷಿ ಉತ್ಪನ್ನಗಳ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹೆಸರಾಂತ ವಿನ್ಯಾಸಕಾರರು, ಆರ್ಥಿಕ ತಜ್ಞರು ಹಾಗೂ ಸಾಮಾಜಿಕ ಕಾರ್ಯಕರ್ತರು ಗ್ರಾಹಕ ಚಳವಳಿಯ ನೇತೃತ್ವ ವಹಿಸಿದ್ದಾರೆ. ಪ್ರದರ್ಶನ ಮಾರಾಟದೊಟ್ಟಿಗೆ ಸಂಸ್ಥೆ ಆವರಣದಲ್ಲಿ ಚರ್ಚಾಗೋಷ್ಠಿ, ಸಾಂಸ್ಕೃ ತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರದರ್ಶನದಲ್ಲಿ ಗ್ರಾಮೋದ್ಯೋಗಕ್ಕೆ ಸಂಬಂಧಪಟ್ಟಂತೆ ಕೈಉತ್ಪನ್ನಗಳು ಇರುತ್ತವೆ. ಕೈಉತ್ಪನ್ನಗಳನ್ನೆ ಕೊಳ್ಳಿ ಎಂದು ಜನತೆಗೆ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಕ್ಲಿಕ್ ಮಾಡಿ, ವಿಡಿಯೋ ನೋಡಿ

ಅ.31 ರಂದು ಬೆಳಿಗ್ಗೆ 11 ಗಂಟೆಗೆ ಉದ್ಗಾಟನೆ ಕಾರ್ಯಕ್ರಮವಿರುತ್ತದೆ. ಡಾ.ರಜನಿ ಪೈ, ಅರುಣಾದೇವಿ ಮತ್ತು ಪ್ರಸನ್ನ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಂಗಕರ್ಮಿ ಪ್ರಸನ್ನ ಮತ್ತು ಡಿವಿಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್.ಟಿ.ಕೃಷ್ಣಮೂರ್ತಿ ಅಂದು ವಾಲ್ಮೀಕಿ ಜಯಂತಿ ಅಂಗವಾಗಿ ರಾಮಾಯಣ ಓದು, ವಾಲ್ಮೀಕಿ ಮತ್ತು ರಾಮಾಯಣ ಪರಂಪರೆ ಕುರಿತು ಮಾತನಾಡಲಿದ್ದಾರೆ ಎಂದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ನ.1ರ ಬೆಳಿಗ್ಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ 11.30ಕ್ಕೆ ಚಿಂತಕ ರಾಜೇಂದ್ರ ಚೆನ್ನಿ ಹಾಗು ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಮೇಠಿ ಶ್ರಮಜೀವಿಗಳ ಕನ್ನಡ ಕುರಿತು ಮಾತನಾಡುವರು. ಸಂಜೆ 5ಕ್ಕೆ ನಮ್ ಟೀಮ್ ತಂಡದಿಂದ ಕರೋನಾ ಜೊತೆ ಜೀವನ ಕುರಿತು ಕಿರು ನಾಟಕ ಹಮ್ಮಿಕೊಳ್ಳಲಾದೆ. ಇದನ್ನು ಗೂಗಲ್ ಮೀಟ್‌ನಲ್ಲೂ ಕೂಡ ನೋಡಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂದ್ಯಾಕಾವೇರಿ, ಸಿ.ಹೆಚ್.ಅಭಿಲಾಶ್ ಇದ್ದರು.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment