SHIMOGA: ಸೀತಾ ಕಲ್ಯಾಣ ಶತಮಾನೋತ್ಸವ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ (Teppotsava) ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತೆಪ್ಪೋತ್ಸವಕ್ಕು ಮೊದಲು ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ನಡೆಸಲಾಯಿತು. ಪಟಾಕಿಗಳನ್ನು ಸಿಡಿಸುತ್ತ, ರಸ್ತೆಯ ಉದ್ದಕ್ಕು ಕರ್ಪೂರ ಹಚ್ಚಲಾಯಿತು.
ವೈಭವದ ತೆಪ್ಪೋತ್ಸವ ಕಣ್ತುಂಬಿಕೊಂಡ ಜನ
ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ ವೈಭವದ ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ದೇವರ ಮೂರ್ತಿಗಳನ್ನು ತೆಪ್ಪದಲ್ಲಿ ಇರಿಸಿ, ತುಂಗಾ ನದಿಯಲ್ಲಿ ಉತ್ಸವ ನೆರವೇರಿಸಲಾಯಿತು.
ಇದನ್ನೂ ಓದಿ » ಬಾಪೂಜಿನಗರದಲ್ಲಿ ಬನಶಂಕರಿ ದೇವಿಯ ವೈಭವದ ರಥೋತ್ಸವ, ಏನೇನೆಲ್ಲ ಪೂಜೆ ಇತ್ತು?
ತೆಪ್ಪೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ತೆಪ್ಪೋತ್ಸವದ ಸಂದರ್ಭ ಬಣ್ಣ ಬಣ್ಣದ ಸಿಡಿಮದ್ದುಗಳನ್ನು ಸಿಡಿಸಲಾಯಿತು. ಇದನ್ನು ಕಣ್ತುಂಬಿಕೊಂಡು ಜನರು ಖುಷಿ ಪಟ್ಟರು. ಇನ್ನು, ಹೊಳೆಯಲ್ಲಿ ದೀಪಗಳನ್ನು ತೇಲಿ ಬಿಡಲಾಯಿತು. ಮತ್ತೊಂದೆಡೆ ತೆಪ್ಪೋತ್ಸವದ ಹಿನ್ನೆಲೆ ಈ ಬಾರಿ ಕಣ್ಮನ ಸೆಳೆಯುವಂತೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.












ಇದನ್ನೂ ಓದಿ » ಶಿವಮೊಗ್ಗದಲ್ಲಿ ಟ್ರಾಫಿಕ್ ಫೈನ್ ಎಷ್ಟಿದೆ ಅಂತಾ ನೋಡಲು ಹೋಗಿ ₹11.25 ಲಕ್ಷ ಕಳೆದುಕೊಂಡ ವ್ಯಕ್ತಿ
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






