ಶಿವಮೊಗ್ಗದಲ್ಲಿ ಗ್ಯಾರಂಟಿ ಯೋಜನೆ ಪ್ರಚಾರ ಸಮಿತಿ ರಚನೆ, ವಿಡಿಯೋ ಚಿತ್ರೀಕರಣ, ತಮಟೆ ಬಾರಿಸುವಂತೆ ಸೂಚನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 17 APRIL 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಎಐಸಿಸಿಯಿಂದ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಬೂತ್ ಮಟ್ಟದ ಪ್ರತಿ ಮನೆಗಳಿಗೆ ತಲುಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಇವತ್ತು ಗ್ಯಾರಂಟಿ ಯೋಜನೆ ಪ್ರಚಾರ ಸಮಿತಿ ರಚಿಸಿ, ಕಾರ್ಯಕರ್ತರಿಗೆ ಬೂತ್ ಮಟ್ಟದ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಬಡ ಕುಟುಂಬ ಸದಸ್ಯರಿಗೆ ವರದಾನವಾಗಿವೆ. ಆದ್ದರಿಂದ, ಬೂತ್ ಮಟ್ಟದ ಪ್ರತಿ ಮನೆಗಳಿಗೆ ಹೋಗಿ ಮತಯಾಚಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸರ್ಕಾರದ ಋಣ ನಮ್ಮ ಮೇಲಿದೆ. ಆ ಋಣ ತೀರಿಸಲು ಅವಕಾಶ ಸಿಕ್ಕಿದೆ. ಖಂಡಿತ ಗೀತಾ ಶಿವರಾಜಕುಮಾರ್‌ ಅವರಿಗೆ ಬೆಂಬಲಿಸುವುದಾಗಿ ಮತದಾರರು ಭರವಸೆ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಕೇಂದ್ರ ಕಾಂಗ್ರೆಸ್ ಪಕ್ಷ ಪ್ರಣಾಳಿಯನ್ನು ಪ್ರತಿ ಮನೆಗಳಿಗೂ ತಲುಪಿಸಬೇಕು. ಯೋಜನೆಗಳ ಕುರಿತ ಅರಿವು ಮೂಡಿಸಬೇಕು. ಬೂತ್‌ ಮಟ್ಟದಲ್ಲಿ ಹಳ್ಳಿಗಳಿಗೆ ತೆರಳಿ ಗ್ಯಾರಂಟಿ ಯೋಜನೆಯ ಕರಪತ್ರ ಅಂಟಿಸಬೇಕು. ಜನರು ಮಧ್ಯವರ್ತಿಗಳಿಗೆ ಲಂಚ ನೀಡದೆ,  ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆದ್ದರಿಂದ, ಜನರಿಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಬೇಕು. ಇದರ ವಿಡಿಯೋ ಚಿತ್ರಿಕರಿಸಿ ಹರಿಬಿಡಬೇಕು ಎಂದರು.

ಕಾಂಗ್ರೆಸ್ ಗ್ಯಾರಂಟಿಯ ಜಿಲ್ಲಾ ಮಟ್ಟದ ಗ್ಯಾರಂಟಿ ಹಬ್ಬ ಆಚರಿಸಬೇಕು. ಇದೇ, ರೀತಿ ತಾಲ್ಲೂಕು, ಬೂತ್ ಮಟ್ಟದಲ್ಲಿಯೂ ತಮಟೆ ಭಾರಿಸುವ ಮೂಲಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ, ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ, ರಮೇಶ್ ಹೆಗ್ಡೆ, ಚಂದ್ರಭೂಪಾಲ್ ಸೇರಿ ಕಾರ್ಯಕರ್ತರು ಇದ್ದರು.ʼ

ಇದನ್ನೂ ಓದಿ – ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಸಾಗರದ ಹಕ್ರೆ ಮಲ್ಲಿಕಾರ್ಜನ್‌, ಬಿಜೆಪಿ ಸೇರ್ಪಡೆಯ ದಿನಾಂಕ ಪ್ರಕಟ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment