ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 FEBRUARY 2024
SHIMOGA : ನಗರದ ಅಲ್ಲಮಪ್ರಭು ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಫಲಾನುಭವಿಗಳು ಯೋಜನೆಯಿಂದ ತಮಗಾದ ಅನಕೂಲದ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಯಾರೆಲ್ಲ ಏನೇನು ಅಭಿಪ್ರಾಯ ಹೇಳಿದರು?
ಫಾತಿಮಾ ರೋಡ್ರಿಗಸ್, ತೀರ್ಥಹಳ್ಳಿ : ಗೃಹಲಕ್ಷ್ಮಿ ಯೋಜನೆಯ ಹಣ ‘ನನ್ನ ಹಣ’ ಎಂಬ ಹೆಮ್ಮೆ ಇದೆ. ಈ ಯೋಜನೆಯ ಸೌಲಭ್ಯ ಪಡೆಯುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಈ ಹಣವು ನನ್ನ ವೈದ್ಯಕೀಯ ವೆಚ್ಚ, ಇತರೆ ವೆಚ್ಚ ಭರಿಸಲು ಸಹಕಾರಿಯಾಗಿದೆ. ಇದುವರೆಗೆ ಒಟು 12 ಸಾವಿರ ರೂ. ನನಗೆ ಸಿಕ್ಕಿದೆ. ಅಷ್ಟಾಗಿ ಆರೋಗ್ಯ ಸರಿಯಿಲ್ಲದ ನನಗೆ ಈ ಯೋಜನೆ ಒಂದು ಭದ್ರತೆ ಒದಗಿಸಿದ್ದು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
ರಾಜೇಶ್, ಶಿವಮೊಗ್ಗ : ನಾವು 11 ಜನ ಮಕ್ಕಳು. ನಮ್ಮ ಮನೆಯಲ್ಲಿ ಖರ್ಚುವೆಚ್ಚ ಭರಿಸುವುದು ಬಹಳ ಕಷ್ಟವಾಗುತ್ತಿತ್ತು. ಗೃಹಜ್ಯೋತಿ ಯೋಜನೆಯಿಂದಾಗಿ ನಮ್ಮ ಕಟುಂಬಕ್ಕೆ ಸಹಾಯವಾಗಿದೆ. ಕೃಷಿ ಕೆಲಸ ಮಾಡುತ್ತಿದ್ದೇವೆ. ವಿದ್ಯುತ್ ಬಿಲ್ 700 ರಿಂದ 800 ರೂ. ಬರುತ್ತಿತ್ತು. ಈಗ ಗೃಹ ಜ್ಯೋತಿ ಯೋಜನೆಯಿಂದ ಕುಟುಂಬಕ್ಕೆ ಅನುಕೂಲ ಆಗಿದೆ.
ಮಧು, ಅನ್ನಭಾಗ್ಯ ಯೋಜನೆ ಫಲಾನುಭವಿ : ನನ್ನ ಬದುಕಿಗೆ ಅನ್ನಭಾಗ್ಯ ಯೋಜನೆಯಿಂದ ಸಹಾಯವಾಗಿದೆ. 5 ಕೆಜಿ ಅಕ್ಕಿ ಹಾಗೂ ಐದು ಕೆಜಿ ಅಕ್ಕಿಯ ಬದಲು ನೀಡುತ್ತಿರುವ ಹಣದಿಂದ ಇತರೆ ಪದಾರ್ಥಗಳ ಖರೀದಿ ಮಾಡುತ್ತಿದ್ದು, ಕುಟುಂಬಕ್ಕೆ ಆಸರೆಯಾಗಿದೆ.
ಶಾಲಿನಿ, ಭದ್ರಾವತಿ : ಶಿವಮೊಗ್ಗದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದೇನೆ. ನಿತ್ಯ ಭದ್ರಾವತಿ ಶಿವಮೊಗ್ಗ ಬಸ್ನಲ್ಲಿ ಓಡಾಡುತ್ತೇನೆ. ತಿಂಗಳಿಗೆ 1500 ರೂ. ಬಸ್ ಚಾರ್ಜ್ಗೆ ಖರ್ಚಾಗುತ್ತಿತ್ತು. ಈಗ ಉಚಿತ ಬಸ್ನಿಂದ ಹಣ ಉಳಿತಾಯವಾಗಿದೆ. ಮಹಿಳೆಯರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ.
ಇದನ್ನೂ ಓದಿ – ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಅಂದವರಿಗೆ ಶಿವಮೊಗ್ಗದಲ್ಲಿ ಡಿಕೆಶಿ ತಿರುಗೇಟು, ಏನಂದ್ರು ಡಿಸಿಎಂ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






