ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2020
ಶಿವಮೊಗ್ಗದ ಪ್ರಸಿದ್ಧ ಆಡಿಕೃತ್ತಿಕೆ ಜಾತ್ರೆಗೂ ಕರೋನ ಬಿಸಿ ತಟ್ಟಿದೆ. ಈ ಬಾರಿ ಜಾತ್ರೆಯನ್ನೇ ರದ್ದುಗೊಳಿಸಲಾಗಿದೆ.
ನಗರದ ಗುಡ್ಡೇಕಲ್ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಆಡಿಕೃತ್ತಿಗೆ ಜಾತ್ರೆ ನಡೆಯುತ್ತಿತ್ತು. ಆದರೆ ಈ ಬಾರಿ ಕರೋನ ಸೋಂಕು ಹರಡುವ ಭಿತಿಯಿಂದ, ಜಾತ್ರೆಯನ್ನು ರದ್ದುಗೊಳಿಸಲಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಂ.ಲೋಕೇಶ್, ಆಗಸ್ಟ್ 11 ಮತ್ತು 12ರಂದು ನಡೆಯಬೇಕಿದ್ದ ಆಡಿಕೃತ್ತಿಗೆ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಆ ದಿನ ದೇವಸ್ಥಾನ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಡಿಕೃತ್ತಿಗೆ ಜಾತ್ರೆ ವೇಳೆ ಶಿವಮೊಗ್ಗದ ವಿವಿಧೆಡೆಯಿಂದ ಕಾವಡಿಗಳನ್ನು ಹೊತ್ತು ಭಕ್ತರು ಬಂದು ದೇವಸ್ಥಾನದಲ್ಲಿ ಹರಕೆ ತೀರಿಸುತ್ತಿದ್ದರು. ಗುಡ್ಡೇಕಲ್ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






