SHIVAMOGGA LIVE NEWS | 20 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೇರೆ ಯುವತಿ ಜೊತೆಗೆ ಪ್ರಿಯಕರ ಮದುವೆ ಆಗುತ್ತಿರುವುದರಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಪ್ರಿಯಕರ ಮದುವೆ ಮಂಟಪದಿಂದಲೇ ಪರಾರಿಯಾಗಿದ್ದಾನೆ..
ಶಿವಮೊಗ್ಗದ ಓ.ಟಿ.ರಸ್ತೆಯ ರೂಪಶ್ರೀ, ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾಲ್ಕು ಪುಟದ ಡೆತ್ ನೋಟ್ ಬರೆದಿದ್ದು, ಪ್ರಿಯಕರನ ವಿರುದ್ಧ ಆರೋಪ ಮಾಡಿದ್ದಾಳೆ.
ಪ್ರಿಯಕರನ ಮದುವೆ ದಿನವೇ ನೇಣಿಗೆ
ಮುರಳಿ ಎಂಬಾತನನ್ನು ರೂಪಶ್ರೀ ಬಹು ವರ್ಷದಿಂದ ಪ್ರೀತಿಸುತ್ತಿದ್ದಳು. ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮುರಳಿಯ ಮದುವೆ ನಿಶ್ಚಯವಾಗಿತ್ತು. ಮದುವೆ ದಿನವೇ ರೂಪಶ್ರೀ ನೇಣಿಗೆ ಶರಣಾಗಿದ್ದಾರೆ.
ಡೆತ್ ನೋಟ್ ಪತ್ತೆ
ಸಾವಿಗೂ ಮುನ್ನ ರೂಪಶ್ರೀ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಇದು ಪತ್ತೆಯಾಗಿದೆ. ‘ಇಬ್ಬರೂ ಪ್ರೀತಿ ಮಾಡುತ್ತಿದ್ದೆವು. ಮದುವೆ ಆಗಲು ಕೂಡ ನಿರ್ಧಾರ ಮಾಡಿಕೊಂಡಿದ್ದೆವು. ಈಗ ತನ್ನನ್ನು ಬಿಟ್ಟು ಬೇರೊಬ್ಬರ ಜೊತೆಗೆ ಮದುವೆ ಆಗುತ್ತಿದ್ದಾನೆ. ಆ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ರೂಪಶ್ರೀ ಡೆತ್ ನೋಟ್’ನಲ್ಲಿ ಬರೆದಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಅಡಿ ಪ್ರಕರಣ ದಾಖಲು ಮಾಡಿದ್ದೇವೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಮದುವೆ ಮನೆಯಿಂದಲೇ ಪರಾರಿ
ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಿಶ್ಚಯವಾಗಿದ್ದ ಯುವತಿಗೆ ಮುರಳಿ ತಾಳಿ ಕಟ್ಟಿದ್ದಾನೆ. ರೂಪಶ್ರೀ ಆತ್ಮಹತ್ಯೆಯ ವಿಚಾರ ತಿಳಿಯುತ್ತಿದ್ದ ಹಾಗೆ ಕಲ್ಯಾಣ ಮಂಟಪದಿಂದಲೇ ಮುರಳಿ ಪರಾರಿಯಾಗಿದ್ದಾನೆ. ‘ಮುರಳಿಯ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಸದ್ಯದಲ್ಲೇ ಆತನನ್ನು ಬಂಧಿಸುತ್ತೇವೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದರು.
ಇಬ್ಬರೂ ಉಪನ್ಯಾಸಕರಾಗಿದ್ದರು
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ರೂಪಶ್ರೀ ಅತಿಥಿ ಉಪನ್ಯಾಸಕರಾಗಿದ್ದರು. ಪಿ.ಹೆಚ್.ಡಿ ಮಾಡುತ್ತಿದ್ದರು. ಇನ್ನು, ಮುರಳಿ ಕೂಡ ಉಪನ್ಯಾಸಕನಾಗಿದ್ದ. ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ. ಬಹು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಈಚೆಗೆ ರೂಪಶ್ರೀಯನ್ನು ಬಿಟ್ಟು ಮನೆಯಲ್ಲಿ ನಿಶ್ಚಯಿಸಿದ್ದ ಯುವತಿ ಜೊತೆಗೆ ಮುರಳಿ ಮದುವೆ ಆಗಿದ್ದಾನೆ.
ಆತ್ಮಹತ್ಯೆ ಪ್ರಕರಣ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






