ಆರು ವಾರದಿಂದ ಸತ್ಯಾಗ್ರಹ ಮಾಡ್ತಿದ್ದೇವೆ, ಇನ್ನಾದರೂ ಸಮಸ್ಯೆ ಬಗೆಹರಿಸಿ, ಸಚಿವರ ಮುಂದೆ ಅತಿಥಿ ಉಪನ್ಯಾಸಕರ ಅಳಲು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಅತಿಥಿ ಉಪನ್ಯಾಸಕರಿಗೆ ಲಾಕ್‌ಡೌನ್ ಅವಧಿಯ ವೇತನ ಮತ್ತು ಸೇವಾ ಭದ್ರತೆ ನೀಡುವ ಸಂಬಂಧ ಮುಖ್ಯ ಮಂತ್ರಿಗಳು ಮಧ್ಯಪ್ರವೇಶಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಒತ್ತಾಯಿಸಿದೆ.

ಲಾಕ್‌ಡೌನ್‌ನಿಂದಾಗಿ ವೇತನ ಮತ್ತು ಉದ್ಯೋಗ ಎರಡು ಇಲ್ಲದೆ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ರ ಮಾರ್ಗಸೂಚಿಯಂತೆ ಜುಲೈ ೩೧ರವರೆಗೆ ವೇತನ ನೀಡಬೇಕು ಎಂದು ಮನವಿ ಮಾಡಿದರು.

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತಾ ೬ ವಾರಗಳಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮಾಡಿದರೂ ಮನವಿ ಸಿಕ್ಕಿಲ್ಲ. ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರು ಕೂಡ ಮಧ್ಯಪ್ರವೇಶ ಮಾಡಿಲ್ಲ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಾದರೂ ಅತಿಥಿ ಉಪನ್ಯಾಸಕರ ರಕ್ಷಣೆಗೆ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಮುಂದಾಗಬೇಕೆಂದು ಮನವಿಯಲ್ಲಿ ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ  ಡಾ.ಹೆಚ್. ಸೋಮಶೇಖರ್ ಶಿಮೊಗ್ಗಿ, ಡಾ.ಎಂ.ಸಿ.ನರಹರಿ, ಕೆ.ರಾಜೇಶ್ ಕುಮಾರ್, ರೂಪಾ ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment