ಬಾಕಿ ವೇತನದ್ದಷ್ಟೇ ಚರ್ಚೆಯಾಯ್ತು, ಸೇವಾ ಭದ್ರತೆ ಬಗ್ಗೆ ಮಾತಿಲ್ಲ, ಅತಿಥಿ ಉಪನ್ಯಾಸಕರ ಅಳಲು ಕೇಳೋರಿಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವ ವಿಚಾರ ಸದನದಲ್ಲಿ ಚರ್ಚೆಯಾಗದೆ, ಸ್ಪಷ್ಟ ನಿರ್ಧಾರ ಪ್ರಕಟವಾಗದೇ ನಿರಾಶೆಯಾಗಿದೆ ಎಂದು  ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಾ.ಸೋಮಶೇಖರ್‌ ಶಿಮೊಗ್ಗಿ ಬೇಸರ ವ್ಯಕ್ತಪಡಿಸಿದ್ದಾರೆ.

https://www.facebook.com/liveshivamogga/videos/2815887715397558/?t=16

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಶೇಖರ್ ಶಿಮೊಗ್ಗಿ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ವಿಚಾರ ಕೂಡಲೇ ಸಂಪುಟ ಸಮಿತಿಗೆ ತರಲು ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಉದ್ಯೋಗ ಭದ್ರತೆ ಮತ್ತು ಲಾಕ್ ಡೌನ್ ಅವಧಿ ವೇತನ ನೀಡುವಂತೆ ೧೧ ವಾರ ರಾಜ್ಯಾದ್ಯಂತ ಮುಷ್ಕರ ನಡೆಸಲಾಯಿತು. ಈ ಬಾರಿಯ ಅಧಿವೇಶನದಲ್ಲಿ ಸೇವಾ ಭದ್ರತೆ ವಿಚಾರ ಚರ್ಚೆಯಾಗದೇ ಕೇವಲ ಬಾಕಿ ವೇತನ ಕೊಡಿಸುವುದಕ್ಕೆ ವಿಧಾನಪರಿಷತ್ ಸದಸ್ಯರು ಚರ್ಚೆ ಸೀಮಿತಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದರು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಬಹುನಿರೀಕ್ಷೆ ಇಟ್ಟು ಪರಿಷತ್ ಚುನಾವಣೆಯಲ್ಲಿ ನಾವು ಅವರಿಗೆ ಮತ ನೀಡಿದ್ದೆವು.ಈಗ ನಮಗೆ ನಿರಾಶೆಯಾಗಿದೆ. ಮತ್ತೊಮ್ಮೆ ಪರಿಷತ್ ಸದಸ್ಯರು ಅತಿಥಿ ಉಪನ್ಯಾಸಕರ ಹಿತ ಕಾಪಾಡುವಲ್ಲಿ ಹಿಂದೆ ಸರಿದಿರುವುದು ಅನುಮಾನಕ್ಕೆ ಎಡೆ ಮಾಡಿದೆ ಎಂದರು.

ಕೋವಿಡ್-೧೯ ಕಾರಣಕ್ಕೆ ಈ ಬಾರಿ ಕಾಲೇಜುಗಳಲ್ಲಿ ದಾಖಲಾತಿ ಇಳಿಮುಖವಾಗಿದೆ. ತರಗತಿ ಆರಂಭ ಅಸ್ಪಷ್ಟವಾಗಿಲ್ಲ. ಆನ್‌ಲೈನ್ ತರಗತಿಗೆ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿದೆ. ಆದರೆ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಸೇವೆಯನ್ನು ೨೦೨೦-೨೧ನೇ ಸಾಲಿಗೆ ನೇಮಿಸಿಕೊಂಡಿಲ್ಲ. ಕೂಡಲೇ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಮಧ್ಯ ಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಂ.ಸಿ.ನರಹರಿ, ಎಂ.ಆರ್.ಶಿವಕುಮಾರ್ ಅಸ್ತಿ ಉಪಸ್ಥಿತರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment