ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಬಸವನಗುಡಿ, ಅಮೀರ್ ಅಹಮ್ಮದ್ ಕಾಲೋನಿ ನಿವಾಸಿಗಳಿಗೆ ಮನೆ ಪರಿಚಯ ಪತ್ರ ವಿತರಿಸಿದರು.
ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ನಗರದ 23 ಪ್ರದೇಶಗಳಲ್ಲಿ ಪರಿಚಯ ಪತ್ರ ವಿತರಿಸಿದ್ದೇವೆ. ಈ ಪರಿಚಯ ಪತ್ರ ಹೊಂದಿದವರಿಗೆ ಹಕ್ಕುಪತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ವತಿಯಿಂದ ಇಲ್ಲಿನ ನಿವಾಸಿಗಳಿಗೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಪರಿಚಯ ಪತ್ರ ಸಿಕ್ಕ ಕೂಡಲೇ ಬ್ಯಾಂಕ್ನಲ್ಲಿ ಲೋನ್ ಸಿಗುತ್ತದೆ ಎಂದು ನಿವಾಸಿಗಳು ಭಾವಿಸಿದ್ದಾರೆ. ಅವರಿಗೆ ಹಕ್ಕುಪತ್ರ ಕೊಡುವ ಮೂಲಕ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಈಶ್ವರಪ್ಪ ಹೇಳಿದರು.
ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ಮಾತನಾಡಿ, ಕೊಳಚೆ ಪ್ರದೇಶ ಎಂದು ಘೋಷಣೆಯಾಗಿ 10 ವರ್ಷವಾಗಿದೆ. ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿ ಪರಿಚಯ ಪತ್ರ ನೀಡಲಾಗಿದೆ. ಸಚಿವರ ಸಹಕಾರದಿಂದ ಹಕ್ಕುಪತ್ರ ಕೂಡ ಸಿಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಸದಸ್ಯ ಇ.ವಿಶ್ವಾಸ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200