SHIVAMOGGA LIVE NEWS | 25 MAY 2024
SHIMOGA : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಸಮಾಪನವಾಯಿತು. ಬೆಳಗ್ಗೆ ಆಂಜನೇಯ ಸ್ವಾಮಿಗೆ ಮಹಾಭಿಷೇಕ, ಬಳಿಕ ಮಾರುತಿ ಮೂಲಮಂತ್ರ ಹೋಮ, ಮಧ್ಯಾಹ್ನ ಪೂರ್ಣಾಹುತಿ ನೆರವೇರಿತು.
ಇದನ್ನೂ ಓದಿ – ಇನ್ನು 3 ಗಂಟೆ ಶಿವಮೊಗ್ಗ ಸೇರಿ ವಿವಿಧೆಡೆ ಅಲರ್ಟ್, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್
ರಾಮ ಹನುಮರ ಎದುರು ಉತ್ಸವ, ಅಷ್ಟಾವಧಾನ ಸೇವೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಈ ಬಾರಿಯ ಹನುಮ ಜಯಂತಿಗೆ ವೈಭವದ ತೆರೆ ಬಿದ್ದಿತು. ಭಾರತೀಯ ವಿಚಾರ ವೇದಿಕೆ, ಭಕ್ತ ಶಿರೋಮಣಿ ಅನಂತರಾಮ ಅಯ್ಯಂಗಾರ್ ಮೆಮೋರಿಯಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ಹನುಮ ಜಯಂತಿ ಅಂಗವಾಗಿ ಮೇ 15ರಿಂದ 21ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೇ 22ರಿಂದ ಶುಕ್ರವಾರದವರೆಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200