ಶಿವಮೊಗ್ಗದಲ್ಲಿ ಭಾರಿ ಮಳೆ, ಮನೆ ಸೇರಲು ಜನರ ಸರ್ಕಸ್, ವ್ಯಾಪಾರಿಗಳಿಗೆ ಸಂಕಷ್ಟ, ಹಲವೆಡೆ ಕರೆಂಟ್ ಕಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಇದರಿಂದ ಜನ ಜೀವನಕ್ಕೆ ಅಡ್ಡಿ ಉಂಟಾಗಿದೆ.

ಎಂಟು ಗಂಟೆ ಹೊತ್ತಿಗೆ ಶಿವಮೊಗ್ಗ ನಗರದಲ್ಲಿ ಮಳೆ ಶುರುವಾಗಿದೆ. ಒಂದು ಗಂಟೆಗೂ ಹೆಚ್ಚು ಹೊತ್ತು ನಿರಂತರ ಮಳೆ ಸುರಿಯುತ್ತಿದೆ. ಮಿಂಚು, ಗುಡುಗು ಅಬ್ಬರ ಜೋರಿದೆ.

ಹೊಂಡ, ಗುಂಡಿ ತುಂಬ ನೀರು

ಶಿವಮೊಗ್ಗ ನಗರದಾದ್ಯಂತ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಇದರಿಂದ ರಸ್ತೆ ತುಂಬೆಲ್ಲ ಹೊಂಡ, ಗುಂಡಿ ತೋಡಲಾಗಿದೆ. ಮಳೆಯಿಂದಾಗಿ ಗುಂಡಿಗಳ ತುಂಬೆಲ್ಲ ನೀರು ಭರ್ತಿಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ADVT JULY NANJAPPA HOSPITAL HOME LAB TESTING

ವ್ಯಾಪಾರಿಗಳಿಗೆ ಫುಲ್ ಲಾಸ್

ಬೆಳಗ್ಗೆಯಿಂದ ಬಿಸಿಲಿತ್ತು, ಸಂಜೆ ವೇಳೆಗೆ ಮೋಡ ಕವಿದಿದ್ದು, ಏಕಾಏಕಿ ಮಳೆ ಶುರುವಾಗಿದೆ. ಇದರಿಂದ ಸಂಜೆ ಮೇಲಿನ ವ್ಯಾಪಾರ, ವಹಿವಾಟಿಗೆ ಭಾರಿ ಪೆಟ್ಟು ಬಿದ್ದಿದೆ. ಶಿವಮೊಗ್ಗದ ತಳ್ಳುಗಾಡಿ ವ್ಯಾಪಾರಿಗಳು, ತನಿಸುಗಳ ಮಾರಾಟಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಅಂಗಡಿಗಳಿಗೆ ಜನರ ಬಾರದಂತಾಗಿದೆ.

ಮನೆಗಳಿಗೆ ಹೋಗಲಾರದ ಸಂಕಷ್ಟ

ಇನ್ನು, ಮಳೆಯ ಮುನ್ಸೂಚನೆ ಇಲ್ಲದೆ ಸಿಟಿಗೆ ಬಂದವರು, ಕೆಲಸ ಮುಗಿಸಿ ಹೊರಟವರು ಮನೆ ಸೇರಲು ಕಷ್ಟಪಡುವಂತಾಗಿದೆ. ದ್ವಿಚಕ್ರ ವಾಹನ, ಬಸ್ಸುಗಳುಗಳಲ್ಲಿ ಸಂಚಾರಿಸವವರು ಮಳೆಯಿಂದ ರಕ್ಷಣೆಗಾಗಿ ಕಟ್ಟಡಗಳು, ಮಳಿಗೆಗಳ ಮುಂದೆ ನಿಂತಿದ್ದಾರೆ. ಬಿಡುವು ಕೊಡದೆ ಮಳೆ ಸುರಿಯುತ್ತಿರುವುದರಿಂದ ಜನರು ಮನೆ ಸೇರಲು ಸರ್ಕಸ್ ಮಾಡುವಂತಾಗಿದೆ.

ಕೈ ಕೊಟ್ಟ ವಿದ್ಯುತ್

ಗುಡುಗು, ಮಿಂಚು, ಮಳೆ ಆರಂಭವಾಗುತ್ತಿದ್ದಂತೆ ವಿದ್ಯುತ್ ಕೈ ಕೊಟ್ಟಿದೆ. ಹಲವು ಕಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಶಿವಮೊಗ್ಗ ನಗರ ಮಾತ್ರವಲ್ಲದೆ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರದಲ್ಲೂ ಭಾರಿ ಮಳೆಯಾಗುತ್ತಿರುವ ವರದಿಯಾಗಿದೆ.

1632381453891714 0

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2021

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment