ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಇದರಿಂದ ಜನ ಜೀವನಕ್ಕೆ ಅಡ್ಡಿ ಉಂಟಾಗಿದೆ.
ಎಂಟು ಗಂಟೆ ಹೊತ್ತಿಗೆ ಶಿವಮೊಗ್ಗ ನಗರದಲ್ಲಿ ಮಳೆ ಶುರುವಾಗಿದೆ. ಒಂದು ಗಂಟೆಗೂ ಹೆಚ್ಚು ಹೊತ್ತು ನಿರಂತರ ಮಳೆ ಸುರಿಯುತ್ತಿದೆ. ಮಿಂಚು, ಗುಡುಗು ಅಬ್ಬರ ಜೋರಿದೆ.
ಹೊಂಡ, ಗುಂಡಿ ತುಂಬ ನೀರು
ಶಿವಮೊಗ್ಗ ನಗರದಾದ್ಯಂತ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಇದರಿಂದ ರಸ್ತೆ ತುಂಬೆಲ್ಲ ಹೊಂಡ, ಗುಂಡಿ ತೋಡಲಾಗಿದೆ. ಮಳೆಯಿಂದಾಗಿ ಗುಂಡಿಗಳ ತುಂಬೆಲ್ಲ ನೀರು ಭರ್ತಿಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ವ್ಯಾಪಾರಿಗಳಿಗೆ ಫುಲ್ ಲಾಸ್
ಬೆಳಗ್ಗೆಯಿಂದ ಬಿಸಿಲಿತ್ತು, ಸಂಜೆ ವೇಳೆಗೆ ಮೋಡ ಕವಿದಿದ್ದು, ಏಕಾಏಕಿ ಮಳೆ ಶುರುವಾಗಿದೆ. ಇದರಿಂದ ಸಂಜೆ ಮೇಲಿನ ವ್ಯಾಪಾರ, ವಹಿವಾಟಿಗೆ ಭಾರಿ ಪೆಟ್ಟು ಬಿದ್ದಿದೆ. ಶಿವಮೊಗ್ಗದ ತಳ್ಳುಗಾಡಿ ವ್ಯಾಪಾರಿಗಳು, ತನಿಸುಗಳ ಮಾರಾಟಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಅಂಗಡಿಗಳಿಗೆ ಜನರ ಬಾರದಂತಾಗಿದೆ.
ಮನೆಗಳಿಗೆ ಹೋಗಲಾರದ ಸಂಕಷ್ಟ
ಇನ್ನು, ಮಳೆಯ ಮುನ್ಸೂಚನೆ ಇಲ್ಲದೆ ಸಿಟಿಗೆ ಬಂದವರು, ಕೆಲಸ ಮುಗಿಸಿ ಹೊರಟವರು ಮನೆ ಸೇರಲು ಕಷ್ಟಪಡುವಂತಾಗಿದೆ. ದ್ವಿಚಕ್ರ ವಾಹನ, ಬಸ್ಸುಗಳುಗಳಲ್ಲಿ ಸಂಚಾರಿಸವವರು ಮಳೆಯಿಂದ ರಕ್ಷಣೆಗಾಗಿ ಕಟ್ಟಡಗಳು, ಮಳಿಗೆಗಳ ಮುಂದೆ ನಿಂತಿದ್ದಾರೆ. ಬಿಡುವು ಕೊಡದೆ ಮಳೆ ಸುರಿಯುತ್ತಿರುವುದರಿಂದ ಜನರು ಮನೆ ಸೇರಲು ಸರ್ಕಸ್ ಮಾಡುವಂತಾಗಿದೆ.
ಕೈ ಕೊಟ್ಟ ವಿದ್ಯುತ್
ಗುಡುಗು, ಮಿಂಚು, ಮಳೆ ಆರಂಭವಾಗುತ್ತಿದ್ದಂತೆ ವಿದ್ಯುತ್ ಕೈ ಕೊಟ್ಟಿದೆ. ಹಲವು ಕಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಶಿವಮೊಗ್ಗ ನಗರ ಮಾತ್ರವಲ್ಲದೆ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಹೊಸನಗರದಲ್ಲೂ ಭಾರಿ ಮಳೆಯಾಗುತ್ತಿರುವ ವರದಿಯಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200