ಶಿವಮೊಗ್ಗದಲ್ಲಿ ಹೆಜ್ಜಾರು ಸಿನಿಮಾ ಟೀಮ್‌ | ಸಾಹಸ ಪ್ರವಾಸೋದ್ಯಮ ಕಾರ್ಯಾಗಾರ – 3 ಫಟಾಟಫ್‌ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JULY 2024

FATAFAT NEWS : ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಸುದ್ದಿಗಳು ಇಲ್ಲಿವೆ. ಒಂದೊಂದೆ ಸುದ್ದಿಯನ್ನು ನಂಬರ್‌ ಸಹಿತ ಪ್ರಕಟಿಸಲಾಗಿದೆ.

#fee3a8

ಜು.19ಕ್ಕೆ ಹೆಜ್ಜಾರು ಸಿನಿಮಾ ರಿಲೀಸ್‌

Hejjaru-Kannada-Movie-cinema-team-in-Shimoga.

SHIMOGA : ಕನ್ನಡದ ಮೊಟ್ಟಮೊದಲ ಪ್ಯಾರಲಲ್‌ ಲೈಫ್‌ನ ಕಥೆಯುಳ್ಳ ಹೆಜ್ಜಾರು ಸಿನಿಮಾ (Movie) ಜು.19ರಂದು ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಹರ್ಷಪ್ರಿಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬ್ಬರ ಜೀವನದಲ್ಲಿ ನಡೆದ ಘಟನೆಯೇ, ವಿಭಿನ್ನ ಕಥೆ ಹೊಂದಿರುವ ಕನ್ನಡದ ಮೊದಲ ಪ್ಯಾರಲಲ್ ಲೈಫ್ ಆಧಾರಿತ ಸಿನಿಮಾ ಇದು. ಸಿನಿಮಾ ಕ್ಷೇತ್ರದ ಹಿರಿಯರು ಹಾಗೂ ಹೊಸಬರು ಸೇರಿ ಈ ಸಿನಿಮಾ ನಿರ್ಮಾಣ ಮಾಡಿರುವುದು ವಿಶೇಷ. ಈಗಾಗಲೇ ಚಿತ್ರದ ಟೀಸರ್ ಅತ್ಯಂತ ಯಶಸ್ವಿಯಾಗಿದೆ. ಇತ್ತೀಚೆಗೆ ಕಿಚ್ಚ ಸುದೀಪ್ ಚಿತ್ರದ ಟೀಸರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂರು ಹಾಡುಗಳಿದ್ದು, ನಾನೇ ಸಾಹಿತ್ಯ ಬರೆದಿದ್ದೇನೆ ಎಂದು ತಿಳಿಸಿದರು. ನಾಯಕಿ ಶ್ವೇತಾ ಡಿಸೋಜ ಸುದ್ದಿಗೋಷ್ಠಿಯಲ್ಲಿದ್ದರು.

#d3effa

ಸಾಹಸ ಪ್ರವಾಸೋದ್ಯಮ ಕಾರ್ಯಾಗಾರ

SHIMOGA : ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೆಟಿಟಿಎಫ್ ಕಾಯ್ದೆಯಡಿ ನೊಂದಣಿ ಮಾಡಿಸಿಕೊಂಡು ಪ್ರಮಾಣಪತ್ರ ಪಡೆಯಲು ಆಸಕ್ತ ಉದ್ದಿಮೆದಾರರಿಗೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಜು. 16ರ ಬೆಳಗ್ಗೆ 10ಕ್ಕೆ ಸಂತೆ ಕಡೂರಿನ ಮಲ್ನಾಡ್ ಶೈ‌ರ್ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಿದೆ. ಕಾರ್ಯಾಗಾರದಲ್ಲಿ ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವವರು, ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸಲು ಆಸಕ್ತಿಯುಳ್ಳ ಉದ್ಯಮದಾರರು ಅಥವಾ ಪ್ರವಾಸೋದ್ಯಮ ಪಾಲುದಾರರು ಭಾಗವಹಿಸಬಹುದು. ಮಾಹಿತಿಗೆ ದೂ. 08182 251444, 70262 96510 ಸಂಪರ್ಕಿಸಿ.

#fee3a8

ಗುರುದಕ್ಷಿಣೆ ಯಕ್ಷಗಾನ ತಾಳಮದ್ದಲೆ

SHIMOGA : ಸಾಗರ ರಸ್ತೆಯ ಬಿಎಸ್‌ಎನ್‌ಎಲ್ ಕಚೇರಿ ಬಳಿ ಇರುವ ಹವ್ಯಕ ಭವನದಲ್ಲಿ ಜು.13ರ ಸಂಜೆ 5ಕ್ಕೆ ಹೊಸೂರಿನ ಭಾರತೀ ಕಲಾ ಮಂಡಲದ ಮಹಿಳಾ ಕಲಾವಿದರು ‘ಗುರುದಕ್ಷಿಣೆ’ ಯಕ್ಷಗಾನ ತಾಳಮದ್ದಲೆ ನಡೆಸಿಕೊಡಲಿದ್ದಾರೆ. ಇದನ್ನು ಹೊಸೂರಿನ ಗುರುನಂದನ ನಿರ್ದೇಶಿಸಿದ್ದು, ಸೃಜನ್ ಗಣೇಶ್ ಹೆಗಡೆ ಭಾಗವತಿಕೆಯಿದೆ, ಚಂಡೆಯಲ್ಲಿ ಕುಮಾರ ಶ್ರೀವತ್ಸ, ಮದ್ದಳೆಯಲ್ಲಿ ಮಂಜುನಾಥ ಗುಡ್ಡೆದಿಂಬ ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಕುಸುಮಾ ಶ್ರೀಕಾಂತ ರಾವ್, ಅಂಬಿಕಾ ಸತೀಶ್ಚಂದ್ರ, ವಾಗೇಶ್ವರಿ ಸುರೇಶ್ ಭಟ್, ನಯನತಾರಾ ಸತೀಶ್ ಮುಂತಾದವರಿದ್ದಾರೆ.‌

ಇದನ್ನೂ ಓದಿ – ಶಿವಮೊಗ್ಗ MLA ನೇತೃತ್ವದಲ್ಲಿ ತುರ್ತು ಮೀಟಿಂಗ್‌, ಅಧಿಕಾರಿಗಳಿಗೆ ಖಡಕ್‌ ಸೂಚನೆ, ಏನೆಲ್ಲ ಹೇಳಿದ್ರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment