ಶಿವಮೊಗ್ಗದಲ್ಲಿ ಹಿಜಾಬ್’ಗಾಗಿ ಪರೀಕ್ಷೆಯನ್ನೇ ತ್ಯಜಿಸಿದ 13 ವಿದ್ಯಾರ್ಥಿನಿಯರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022

ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ ವಿದ್ಯಾರ್ಥಿನಿಯರು ಪರೀಕ್ಷೆ ತ್ಯಜಿಸಿ ಹೊರ ನಡೆದಿದ್ದಾರೆ.

Nanjappa Hospital testing price chart

ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜ ಪ್ರೌಢಶಾಲೆ ವಿಭಾಗದಲ್ಲಿ ಘಟನೆ ಸಂಭವಿಸಿದೆ. 13 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಹೊರ ನಡೆದಿದ್ದಾರೆ. ಎಂದಿನಂತೆ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಗೆ ತೆರಳಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಹಿಜಾಬ್ ಧರಿಸದಂತೆ ಶಿಕ್ಷಕರು ಸೂಚಿಸಿದರು.

ಪರೀಕ್ಷಾ ಕೊಠಡಿಯಿಂದ ಹೊರ ನಡೆದರು

ವಿದ್ಯಾರ್ಥಿನಿಯರು ಬೆಳಗ್ಗೆ ಪರೀಕ್ಷಾ ಕೊಠಡಿಯೊಳಗೆ ಬಂದಿದ್ದರು. ಹಿಜಾಬ್, ಬುರ್ಖಾ ಧರಿಸುವಂತಿಲ್ಲ ಎಂದು ಶಿಕ್ಷಕರು ತಿಳಿಸಿದ್ದಾರೆ. ಆದರೆ ಹಿಜಾಬ್ ತೆಗೆಯಲು ಒಪ್ಪದ 13 ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಯಿಂದ ಹೊರ ನಡೆದಿದ್ದಾರೆ. ಈ ಪೈಕಿ ಇಬ್ಬರು ಎಂಟು ಮತ್ತು ಒಂಭತ್ತನೆ ತರಗತಿಯವರು. ಉಳಿದವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರಾಗಿದ್ದಾರೆ.

ಮನವೊಲಿಕೆ ಪ್ರಯತ್ನ ವಿಫಲ

ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಯಿಂದ ಹೊರೆ ನಡೆಯುವುದಾಗಿ ತಿಳಿಸಿದ್ದಾರೆ. ಆದರೆ ಶಿಕ್ಷಕರು ಅವರ ಮನವೊಲಿಸಿ ಪರೀಕ್ಷೆ ಎದುರಿಸುವಂತೆ ಹೇಳಿದ್ದಾರೆ. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೊರ ನಡೆದಿದ್ದಾರೆ.

ಡಿಡಿಪಿಐ ಹೇಳಿದ್ದೇನು?

ಈ ಕುರಿತು ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ್, ‘ಪರೀಕ್ಷೆ ಬರೆಯಲು ಅವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ಸ್ಕಾರ್ಫ್ ತೆಗೆದು ಪರೀಕ್ಷೆ ಬರೆಯುವಂತೆ ತಿಳಿಸಲಾಗಿತ್ತು. ಮಕ್ಕಳಿಗೆ ತಿಳಿ ಹೇಳುವ ಪ್ರಯತ್ನ ಮಾಡಿದ್ದೇವೆ.’ ಎಂದು ತಿಳಿಸಿದರು.

ಪೋಷಕರು ಹೇಳುವುದೇನು?

‘ನಮ್ಮ ಮಕ್ಕಳು ತಲೆ ಮೇಲೆ ಸ್ಕಾರ್ಫ್ ಕಟ್ಟಿಕೊಂಡಿದ್ದಾರೆ. ಅದನ್ನು ತೆಗೆಯುವಂತೆ ತಿಳಿಸಿದರು. ಮೇಲಿಂದ ಆದೇಶವಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನಮ್ಮ ಮಕ್ಕಳನ್ನು ಕರೆದೊಯ್ಯುತ್ತಿದ್ದೇವೆ.’ ಎಂದು ಪೋಷಕರೊಬ್ಬರು ತಿಳಿಸಿದರು.

ಬಿಗಿ ಭದ್ರೆತೆಯಲ್ಲಿ ಶಾಲೆ ಆರಂಭ

ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆ ರಾಜ್ಯ ಸರ್ಕಾರ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಮೊದಲ ಹಂತದಲ್ಲಿ ಪ್ರೌಢಶಾಲೆಗಳ ತರಗತಿ ಆರಂಭವಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಪ್ರೌಢಶಾಲೆಗಳು ಪುನಾರಂಭವಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಕಳೆದ ವಾರ ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲು ತೂರಟವಾಗಿತ್ತು. ಸಮೀಪದಲ್ಲೇ ಇರುವ ಬಿ.ಹೆಚ್.ರಸ್ತೆಯ ಸರ್ಕಾರಿ ಪ್ರೌಢಶಾಲೆ ಇದೆ. ಆದ್ದರಿಂದ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಅಹಿತಕರ ಘಟನೆ ಸಂಭವಿಸದಂತೆ ಮೀಸಲು ಪೊಲೀಸರನ್ನು ಕೂಡ ನಿಯೋಜಿಸಲಾಗಿದೆ.

ತರಗತಿಗೆ ಹಿಜಾಬ್, ಬುರ್ಖಾ ಇಲ್ಲ

ಹಿಜಾಬ್, ಬುರ್ಖಾ, ಕೇಸರಿ ಶಾಲು ಧರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಅದರಂತೆ ಇವತ್ತು ಶಿವಮೊಗ್ಗ ಜಿಲ್ಲೆಯ ಬಹುತೇಕ ಶಿಕ್ಷಣ ಸಂಸ್ಥೆಗಳಲ್ಲಿ ಬುರ್ಖಾ, ಹಿಜಾಬ್ ಸೇರಿದಂತೆ ಧರ್ಮ ಸೂಚಕ ಬಟ್ಟೆ ಧರಿಸದಂತೆ ನಿಗಾ ವಹಿಸಲಾಯಿತು. ಹಿಜಾಬ್, ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಸಮವಸ್ತ್ರದಲ್ಲಿ ಶಾಲೆಗೆ ಬರುವಂತೆ ಸೂಚಿಸಲಾಯಿತು.

shimoga dc and sp inspection at school

‘ಶಿವಮೊಗ್ಗ ಜಿಲ್ಲೆಯ ಎಲ್ಲಾ ಕಡೆಯು ತರಗತಿಗಳು ನಡೆಯುತ್ತಿವೆ. ಸಾಗರ, ಶಿಕಾರಿಪುರದಲ್ಲಿ ಒಂದು ಕಡೆಯಲ್ಲಿ ಸ್ವಲ್ಪ ಸಮಸ್ಯೆ ಉಂಟಾಗಿದೆ. ಇದರ ಹೊರತು ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ಸೇರಿದಂತೆ ಎಲ್ಲೆಡೆಯು ತರಗತಿಗಳು ಎಂದಿನಂತೆ ನಡೆಯುತ್ತಿವೆ’ ಎಂದು ಡಿಡಿಪಿಐ ತಿಳಿಸಿದ್ದಾರೆ.

ಮತ್ತೊಂದು ಸ್ವರೂಪದ ಆತಂಕ

ಪ್ರೌಢಶಾಲೆ ಹಂತದಲ್ಲಿಯೇ ಕೆಲ ಶಾಲೆಗಳಲ್ಲಿ ಮಕ್ಕಳು ಹಿಜಾಬ್ ತೆಗೆಯಲು ಹಿಂದೇಟು ಹಾಕಿದ್ದಾರೆ. ಇದು ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ಹೊಸ ತಲೆನೋವು ತಂದಿದೆ. ಪೋಷಕರು ಮತ್ತು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನವಾಗುತ್ತಿದೆ. ಅಲ್ಲದೆ ಶಾಲೆಗಳ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

police out side bh road high school in shimoga

ಇದನ್ನೂ ಓದಿ | About Shivamogga Live

shimoga live age wise reach graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 14, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment