ಶಿವಮೊಗ್ಗ LIVE
ಶಿವಮೊಗ್ಗ: ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ (Hindu Groups) ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರ ಬರ್ಬರ ಹತ್ಯೆಗಳು, ದೌರ್ಜನ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ದೇವಾಲಯಗಳ ಧ್ವಂಸ, ಮಹಿಳೆಯರ ಮೇಲಿನ ದೌರ್ಜನ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಭಾರತ ಸರ್ಕಾರವು ಅಗತ್ಯ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ದ್ವೇಷ ಭಾಷಣ ವಿಧೇಯಕಕ್ಕೆ ವಿರೋಧ

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ದ್ವೇಷ ಭಾಷಣ ವಿಧೇಯಕವನ್ನು ತಕ್ಷಣವೇ ವಾಪಾಸ್ಸು ಪಡೆಯಬೇಕು. ಈ ವಿಧೇಯಕವು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಹಿಂದೂ ಸಮಾಜದ ಧಾರ್ಮಿಕ ಆಚರಣೆ, ಧರ್ಮಪ್ರಚಾರ ಹಾಗೂ ಸತ್ಯ ವಚನಕ್ಕೆ ಅಡ್ಡಿಯಾಗಲಿದೆ. ಆದ್ದರಿಂದ ಈ ವಿಧೇಯಕವನ್ನು ತಕ್ಷಣವೇ ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ » ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಲೋಕಾಯುಕ್ತ ತಂಡ ದಿಢೀರ್ ಭೇಟಿ, ಪರಿಶೀಲನೆ
ಪ್ರಮುಖರಾದ ದಿನೇಶ್ ಚೌಹಾಣ್, ರಮೇಶ್ ಬಾಬು, ವಾಸುದೇವ, ಪ್ರಫುಲ್ಲಚಂದ್ರ, ಪರಿಸರ ರಮೇಶ್, ಯೋಗೇಶ್, ಪ್ರದೀಪ್, ಮುಕುಂದ, ಬಸವರಾಜ್, ಶಬರೀಶ್ ಮೊದಲಾದವರಿದ್ದರು.
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು




