ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ, ಸಾವರ್ಕರ್ ಪರ ಘೋಷಣೆ

 SHIVAMOGGA LIVE NEWS 

ಶಿವಮೊಗ್ಗ | ಹಿಂದೂ ಸಂಘಟನೆಗಳ ಮಹಾಮಂಡಳಿ (Hindu Mahasabha) ವತಿಯಿಂದ ಶಿವಮೊಗ್ಗದಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸಾಂಪ್ರದಾಯಿಕವಾಗಿ ಮೆರವಣಿಗೆ ಮೂಲಕ ಗಣಪತಿ ಮೂರ್ತಿಯನ್ನು ತಂದು ವಿಶೇಷ ಪೂಜೆ ಸಲ್ಲಿಸಲಾಯಿತು.

Shimoga Nanjappa Hospital

ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ (Kote Bheemeshwara Temple) ಆವರಣದಲ್ಲಿ ಹಿಂದೂ ಮಹಾಸಭಾ (Hindu Mahasabha) ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.

ವಾದ್ಯಗಳೊಂದಿಗೆ ಮೆರವಣಿಗೆ

ಪ್ರತಿ ವರ್ಷದಂತೆ ಕುಂಬಾರ ಬೀದಿಯ ಕಲಾವಿದ ಗಣೇಶ್ ಅವರ ಮನೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿ ತಯಾರಿಸಲಾಗಿತ್ತು. ಗಣೇಶ್ ಅವರ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಗಣಪತಿ ಮೂರ್ತಿಯನ್ನು ಮೆರವಣಿಗೆ ಮೂಲಕ ಕೋಟೆ ಭೀಮೇಶ್ವರ ದೇವಸ್ಥಾನಕ್ಕೆ ತರಲಾಯಿತು. ಕಲಾತಂಡಗಳು, ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

Kalleshwara-Enterprises.webp

ಪ್ರದಕ್ಷಿಣೆ, ವಿಶೇಷ ಪೂಜೆ

ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೂರ್ತಿಯನ್ನು ಹೊತ್ತು ದೇವಸ್ಥಾನದಲ್ಲಿ ಪ್ರದಕ್ಷಿಣೆ ನೆರವೇರಿಸಲಾಯಿತು. ಬಳಿಕ ದೇಗುಲದ ಆವರಣದಲ್ಲಿ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

Shimoga Hindu Mahasabha Ganapathi

78ನೇ ವರ್ಷದ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ ಹಿಂದೂಗಳು ಒಗ್ಗೂಡಬೇಕು ಎಂದು ವೀರ್ ಸಾವರ್ಕರ್ ಅವರ ಮಾರ್ಗದರ್ಶನದಂತೆ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಮಾಡಲಾಯಿತು. ಚೌತಿಯಂದು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುತ್ತೇವೆ. ಅನಂತ ಚತುರ್ದಶಿಯಂದು ಗಣಪತಿಯ ವಿಸರ್ಜನೆ ಮಾಡಲಾಗುತ್ತದೆ.ದತ್ತಾತ್ರೇಯ, ಖಜಾಂಚಿ, ಹಿಂದೂ ಸಂಘಟನಗಳ ಮಹಾಮಂಡಳಿ

ಸಾವರ್ಕರ್ ಪರ ಘೋಷಣೆ

ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆಗೆ ವೀರ ಸಾವರ್ಕರ್ (Veer Savarkar) ಕಾರಣಿಕರ್ತರು. ಹಾಗಾಗಿ ಇವತ್ತು ಗಣಪತಿ ಪ್ರತಿಷ್ಠಾಪನೆ ಮಾಡುತ್ತಿದ್ದಂತೆ ವೀರ ಸಾವರ್ಕರ್ ಪರವಾಗಿ ಘೋಷಣೆ ಕೂಗಲಾಯಿತು. ಇನ್ನು, ಕೋಟೆ ರಸ್ತೆಯಿಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿರುವ ಶ್ರೀ ಭೀಮೇಶ್ವರ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ವೀರ ಸಾವರ್ಕರ್ ಮಹಾದ್ವಾರ ಸ್ಥಾಪಿಸಲಾಗಿದೆ.

hindu mahasabha ganapathi

ಕರೋನಾದಿಂದ ಮೆರವಣಿಗೆ ನಡೆದಿರಲಿಲ್ಲ

ಕರೋನ ಮತ್ತು ಲಾಕ್ ಡೌನ್ ಹಿನ್ನೆಲೆ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ಸರ್ಕಾರ ನಿರಾಕರಿಸಿತ್ತು. ಆದರೆ ಕಳೆದ ವರ್ಷ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ಮೆರವಣಿಗೆಗೆ ಅವಕಾಶ ಇರಲಿಲ್ಲ. ಹಾಗಾಗಿ ಅನಂತ ಚತುರ್ದಶಿಯಂದು ಮೆರವಣಿಗೆ ನಡೆಸದೆಯೆ ವಿಸರ್ಜನೆ ನೆರವೇರಿಸಲಾಗಿತ್ತು.

Hindu Mahasabha Ganapathi

Karanagiri-Ganapathi-Temple-Museum

ಇದನ್ನೂ ಓದಿ – ಥೈಲ್ಯಾಂಡ್, ಮಹಾರಾಷ್ಟ್ರದಂತೆ ಹೊಸನಗರದಲ್ಲೂ ಗಣಪತಿ ಮ್ಯೂಸಿಯಂ, ಹೇಗಿದೆ? ಏನೇನೆಲ್ಲ ಇದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment