SHIVAMOGGA LIVE NEWS
SHIMOGA | ಹಿಂದೂ ಸಂಘಟನೆಗಳ (HINDU MAHASABHA) ಮಹಾಮಂಡಳದ ಗಣಪತಿ ಮೆರವಣಿಗೆ ಅದ್ಧೂರಿಯಿಂದ ಸಾಗಿದೆ. ಬಿಗಿ ಭದ್ರತೆ ನಡುವೆ ಅಮೀರ್ ಅಹಮದ್ ಸರ್ಕಲ್’ನಲ್ಲಿ (AA CIRCLE) ಮೆರವಣಿಗೆ ನಡೆಯಿತು.
ಅಮೀರ್ ಅಹಮದ್ ವೃತ್ತದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರು ಘೋಷಣೆಗಳನ್ನು ಕೂಗಿದರು. ಹಿಂದೂ ಹರ್ಷನ ಭಾವಚಿತ್ರ ಹಿಡಿದು ಮೆರವಣಿಗೆ ನಡೆಸಿದರು.
ಗಣಪತಿ ಆಗಮನ
ರಾತ್ರಿ 7.30ರ ಹೊತ್ತಿಗೆ ಗಣಪತಿ ಆಗಮಿಸಿತು. ಈ ವೇಳೆ ಯುವಕರು ಘೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಲಾಯಿತು. ಅಲ್ಲದೆ ತುಳಸಿ ಹಾರ, ಬೃಹತ್ ಗಾತ್ರದ ಹೂವಿನ ಹಾರಗಳನ್ನು ಗಣಪತಿಗೆ ಅರ್ಪಿಸಲಾಯಿತು.
ಬಿಗಿ ಬಂದೋಬಸ್ತ್
ಅಮೀರ್ ಅಹಮದ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜಿಲ್ಲಾ ಪೊಲೀಸರು, ಆರ್.ಎ.ಎಫ್, ಕೆ.ಎಸ್.ಆರ್.ಪಿ ಪೊಲೀಸರು ಸರ್ಕಲ್’ನ ಅರ್ಧ ಭಾಗದವರೆಗೂ ಸರ್ಪವಾಗಲು ನಿರ್ಮಿಸಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ಅವರು ಸರ್ಕಲ್’ನಲ್ಲಿಯೆ ನಿಂತು ಭದ್ರತೆಯ ಉಸ್ತುವಾರಿ ವಹಿಸಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, FULL PHOTOS
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.